Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...