Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...