Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...