Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...