Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಒಂದು ವಿಶ್ಲೇಷಣೆ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...