Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...