Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...