Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...