Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...