Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ...

ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್...

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ...

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ...

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ. ಶಾಹದರಾದ...

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 'ಈ ಹಿಂದೆ' ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ...

ಪಶ್ಚಿಮ ಬಂಗಾಳ| ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಬಾಂಗ್ಲಾದೇಶದಿಂದ ಬಂದ 12 ಹಿಂದೂ ನಿರಾಶ್ರಿತ ಕುಟುಂಬಗಳು

ಧಾರ್ಮಿಕ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಹಲವು ವರ್ಷಗಳ ಹಿಂದೆ ಭಾರತಕ್ಕೆ ಪಲಾಯನ ಮಾಡಿದ ಬಾಂಗ್ಲಾದೇಶದ 12 ಹಿಂದೂ ನಿರಾಶ್ರಿತರಿಗೆ ಕೇಂದ್ರ ಸರ್ಕಾರ ಭಾರತೀಯ ಪೌರತ್ವ ನೀಡಿದೆ ಎಂದು 'ದಿ ಅಬ್ಸರ್ವರ್‌ ಪೋಸ್ಟ್‌' ವರದಿ ಮಾಡಿದೆ. ...

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ...

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ: ಸಿಬಿಐ ತನಿಖೆಗೆ ಆಗ್ರಹಿಸಿ, ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಜೀವ್ ಚಂದ್ರಶೇಖರ್

ಕೊಚ್ಚಿ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಚಂದ್ರಶೇಖರ್ ತಮ್ಮ ಅರ್ಜಿಯಲ್ಲಿ...