Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...