Homeಮುಖಪುಟ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ವಿವಾದಾತ್ಮಕ ಕಾನೂನುಗಳನ್ನು ಬೆಂಬಲಿಸುವ ವಾದಗಳನ್ನು ಆಲಿಸುವ ಮನಸ್ಥಿತಿಯಲ್ಲಿಲ್ಲ. ಈಗ ಈ ರೈತರನ್ನು “ದಾರಿ ತಪ್ಪಿಸಬೇಕು’ ಅಷ್ಟೇ. ದಯವಿಟ್ಟು ಈ ಕುರಿತು ಐಡಿಯಾ ಕೊಡಿ’ ಎಂದು ಹರಿಯಾಣ ಬಿಜೆಪಿ ಕಾರ್ಯಕರ್ತರು ಸೋಮವಾರ ಹಿರಿಯ ಮುಖಂಡರಿಗೆ ಆಗ್ರಹಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ರಣದೀಪ್‌ಸಿಂಗ್ ಸುರ್ಜೆವಾಲಾ ಇದನ್ನು ಟ್ವೀಟ್ ಮಾಡಿ ಬಿಜೆಪಿಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ರೈತರ ಪ್ರತಿಭಟನಾ ವಿಷಯದ ಕುರಿತಂತೆ ಹರಿಯಾಣ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಗುರಗಾಂವ್‌ನಲ್ಲಿ ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಒ.ಪಿ ಧಂಕರ್, ಕ್ರೀಡಾ ಸಚಿವ ಸಂದೀಪ್ ಸಿಂಗ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಭಾಗವಹಿಸಿದ್ದರು. ಆಗ ಕಾರ್ಯಕರ್ತರೊಬ್ಬರು, ‘ಕೃಷಿ ಕಾನೂನುಗಳು ನಿಮ್ಮ ಪರ ಇವೆ ಎಂದರೆ ರೈತರು ನಂಬುತ್ತಿಲ್ಲ. ಅವರನ್ನು ದಾರಿ ತಪ್ಪಿಸುವುದೊಂದೇ ಉಳಿದ ಮಾರ್ಗ. ಈ ಕುರಿತು ಐಡಿಯಾ ಕೊಡಿ’ ಎಂದು ನಾಯಕರನ್ನು ಆಗ್ರಹಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಆನ್‌ಲೈನ್‌ನಲ್ಲಿ ಸುದ್ದಿ ಮಾಡಿದ್ದು, ಕಾಂಗ್ರೆಸ್‌ನ ಸುರ್ಜೆವಾಲಾ ಕೂಡ ಇದನ್ನು ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಪಕ್ಷದ ಮುಖಂಡರು ಮತ್ತು ಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರಿಗೆ ‘ರೈತರನ್ನು ಮರುಳು ಮಾಡುವ’ ಸಲಹೆಗಳನ್ನು ಕೇಳುತ್ತಿದ್ದಾರೆ. ಅವರು ಸ್ಪಷ್ಟವಾಗಿ ಹೇಳುತ್ತಿರುವುದು, ನಮ್ಮ ವಾದಗಳಿಂದ ರೈತರನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಮತ್ತು ಅದರಿಂದ ನಾವೇವಮೂರ್ಖರಾಗಬೇಕು ಅಷ್ಟೇ. ಇದು ಬಿಜೆಪಿಯ ನಿಜವಾದ ಮುಖ. ರೈತರಿಗೆ ಅಷ್ಟಾಗಿ ಕಾಣಿಸದ ಮುಖ”ಎಂದು ಸುರ್ಜೆವಾಲಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ರೈತರ ಬಳಿ ಹೋಗಿ, ಈ ಕಾನೂನುಗಳ ಬಗ್ಗೆ ಅರಿವು ಮುಡಿಸಿ’ ಎಂದು ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಅವರ ಮಾತಿನಂತೆ ರೈತರ ಬಳಿ ಹೋದ ಕಾರ್ಯಕರ್ತರಿಗೆ ರೈತರು ಛೀಮಾರಿ ಹಾಕುತ್ತಿದ್ದಾರೆ, ಘೇರಾವ್ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ ಅಂತ್ಯದಿಂದ ರೈತರು ಕೇಂದ್ರದ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗಿನ 11 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ರೈತರು ತಾವು ಹಿಂದೆ ಸರಿಯುವುದಿಲ್ಲ ಮತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಎಂಎಸ್‌ಪಿಗೆ ಕಾನೂನು ಖಾತರಿ ಕೇಳುತ್ತಿದ್ದಾರೆ.
ರೈತರು ತಮ್ಮ ಆಂದೋಲನಕ್ಕೆ ರಾಷ್ಟ್ರವ್ಯಾಪಿ ಬೆಂಬಲವನ್ನು ಪ್ರದರ್ಶಿಸುವುದರೊಂದಿಗೆ ತಮ್ಮ ಪ್ರತಿಭಟನೆಯನ್ನು ವಿಸ್ತರಿಸುತ್ತಿದ್ದಾರೆ.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...