Homeಮುಖಪುಟನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ - ಗುಜರಾತ್‌ನಲ್ಲಿ ಕೇಜ್ರಿವಾಲ್

ನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ – ಗುಜರಾತ್‌ನಲ್ಲಿ ಕೇಜ್ರಿವಾಲ್

- Advertisement -
- Advertisement -

ಗುಜರಾತ್‌ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು (ಮಾ.2) ನಡೆಯುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಎಎಪಿ, “ಗುಜರಾತ್‌ನಿಂದ ಒಳ್ಳೆಯ ಸುದ್ದಿ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 24 ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗುಜರಾತ್‌ನ ನಗರಗಳಲ್ಲಿ ಪ್ರಾರಂಭವಾದ ಕ್ರಾಂತಿ ಗ್ರಾಮೀಣ ಚುನಾವಣೆಯಲ್ಲಿಯೂ ಮುಂದುವರೆದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ.

81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು.

ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 60 ಪುರಸಭೆ ಸ್ಥಾನಗಳಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ಫೆಬ್ರವರಿ 21 ರಂದು ನಡೆದ ಆರು ಪುರಸಭೆಗಳ ಚುನಾವಣೆಯಲ್ಲಿ, ಎಎಪಿಯ ಸಾಧನೆ ಅಚ್ಚರಿ ಮೂಡಿಸಿತ್ತು. ಇದೇ ಮೊದಲ ಬಾರಿಗೆ ಗುಜರಾತ್‌ನ ಎಲ್ಲಾ ನಾಗರಿಕ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಎಎಪಿಯು ಕಾಂಗ್ರೆಸ್ ಅನ್ನು ಹಿಂದಿಕ್ಕಿ 27 ಸ್ಥಾನಗಳನ್ನು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಏರಿದೆ.

ಸೂರತ್ ಮತದಾರರಿಗೆ ಧನ್ಯವಾದ ಅರ್ಪಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಸೂರತ್‌ನಲ್ಲಿ ರೋಡ್ ಶೋ ನಡೆಸಿದರು. ಜೊತೆಗೆ ಇಲ್ಲಿ 2022 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸಾಧಿಸಬೇಕಾದ ಗುರಿಯ ಕುರಿತು ಘೋಷಿಸಿದರು.

ಇದನ್ನೂ ಓದಿ: ಈ ಸಲದ ಬೇಸಿಗೆ: ಉತ್ತರ ಉರಿಯಲಿದೆ, ದಕ್ಷಿಣಕ್ಕೆ ಕೊಂಚ ರಿಲೀಫ್!

“ಒಂದು ಪಕ್ಷವು ರಾಜಿಯ ರಾಜಕಾರಣ ಮಾಡುತ್ತಿದ್ದರೆ, ಇನ್ನೊಂದು ಪಕ್ಷವು ದ್ವೇಷದ ರಾಜಕಾರಣವನ್ನು ಮಾಡುತ್ತದೆ. ಆದರೆ, ಜನರಿಗೆ ಉದ್ಯೋಗ ಬೇಕೇ ಹೊರತು ರಾಜಕೀಯವಲ್ಲ. ಜನರು ಉತ್ತಮ ರಸ್ತೆಗಳು, ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ಬಯಸುತ್ತಾರೆ” ಎಂದು ಕೇಜ್ರಿವಾಲ್ ಹೇಳಿದರು.

“ಅವರು 25 ವರ್ಷಗಳಲ್ಲಿ ಏನು ಮಾಡಲು ಸಾಧ್ಯವಾಗಲಿಲ್ಲವೋ ಅದನ್ನು ನಾವು 5 ವರ್ಷಗಳಲ್ಲಿ ಮಾಡುತ್ತೇವೆ. ಗುಜರಾತ್‌ನಲ್ಲಿ ಒಮ್ಮೆ ನಮಗೆ ಐದು ವರ್ಷಗಳನ್ನು ನೀಡಿ; ನಂತರ ಬಿಜೆಪಿಯ 25 ವರ್ಷಗಳ ಆಡಳಿತವನ್ನು ನೀವು ಮರೆತುಬಿಡುತ್ತೀರಿ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷವು ಈಗಾಗಲೇ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...