Homeಮುಖಪುಟನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ - ಗುಜರಾತ್‌ನಲ್ಲಿ ಕೇಜ್ರಿವಾಲ್

ನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ – ಗುಜರಾತ್‌ನಲ್ಲಿ ಕೇಜ್ರಿವಾಲ್

- Advertisement -
- Advertisement -

ಗುಜರಾತ್‌ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು (ಮಾ.2) ನಡೆಯುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಎಎಪಿ, “ಗುಜರಾತ್‌ನಿಂದ ಒಳ್ಳೆಯ ಸುದ್ದಿ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 24 ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗುಜರಾತ್‌ನ ನಗರಗಳಲ್ಲಿ ಪ್ರಾರಂಭವಾದ ಕ್ರಾಂತಿ ಗ್ರಾಮೀಣ ಚುನಾವಣೆಯಲ್ಲಿಯೂ ಮುಂದುವರೆದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ.

81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು.

ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 60 ಪುರಸಭೆ ಸ್ಥಾನಗಳಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ಫೆಬ್ರವರಿ 21 ರಂದು ನಡೆದ ಆರು ಪುರಸಭೆಗಳ ಚುನಾವಣೆಯಲ್ಲಿ, ಎಎಪಿಯ ಸಾಧನೆ ಅಚ್ಚರಿ ಮೂಡಿಸಿತ್ತು. ಇದೇ ಮೊದಲ ಬಾರಿಗೆ ಗುಜರಾತ್‌ನ ಎಲ್ಲಾ ನಾಗರಿಕ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಎಎಪಿಯು ಕಾಂಗ್ರೆಸ್ ಅನ್ನು ಹಿಂದಿಕ್ಕಿ 27 ಸ್ಥಾನಗಳನ್ನು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಏರಿದೆ.

ಸೂರತ್ ಮತದಾರರಿಗೆ ಧನ್ಯವಾದ ಅರ್ಪಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಸೂರತ್‌ನಲ್ಲಿ ರೋಡ್ ಶೋ ನಡೆಸಿದರು. ಜೊತೆಗೆ ಇಲ್ಲಿ 2022 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸಾಧಿಸಬೇಕಾದ ಗುರಿಯ ಕುರಿತು ಘೋಷಿಸಿದರು.

ಇದನ್ನೂ ಓದಿ: ಈ ಸಲದ ಬೇಸಿಗೆ: ಉತ್ತರ ಉರಿಯಲಿದೆ, ದಕ್ಷಿಣಕ್ಕೆ ಕೊಂಚ ರಿಲೀಫ್!

“ಒಂದು ಪಕ್ಷವು ರಾಜಿಯ ರಾಜಕಾರಣ ಮಾಡುತ್ತಿದ್ದರೆ, ಇನ್ನೊಂದು ಪಕ್ಷವು ದ್ವೇಷದ ರಾಜಕಾರಣವನ್ನು ಮಾಡುತ್ತದೆ. ಆದರೆ, ಜನರಿಗೆ ಉದ್ಯೋಗ ಬೇಕೇ ಹೊರತು ರಾಜಕೀಯವಲ್ಲ. ಜನರು ಉತ್ತಮ ರಸ್ತೆಗಳು, ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ಬಯಸುತ್ತಾರೆ” ಎಂದು ಕೇಜ್ರಿವಾಲ್ ಹೇಳಿದರು.

“ಅವರು 25 ವರ್ಷಗಳಲ್ಲಿ ಏನು ಮಾಡಲು ಸಾಧ್ಯವಾಗಲಿಲ್ಲವೋ ಅದನ್ನು ನಾವು 5 ವರ್ಷಗಳಲ್ಲಿ ಮಾಡುತ್ತೇವೆ. ಗುಜರಾತ್‌ನಲ್ಲಿ ಒಮ್ಮೆ ನಮಗೆ ಐದು ವರ್ಷಗಳನ್ನು ನೀಡಿ; ನಂತರ ಬಿಜೆಪಿಯ 25 ವರ್ಷಗಳ ಆಡಳಿತವನ್ನು ನೀವು ಮರೆತುಬಿಡುತ್ತೀರಿ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷವು ಈಗಾಗಲೇ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...