ನ್ಯಾಯಮೂರ್ತಿಗಳ ವಿರುದ್ಧ ವೈಯಕ್ತಿಕ ದಾಳಿ ನಡೆಸುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಕಟುವಾಗಿ ಟೀಕಿಸಿದ್ದಾರೆ.
ಕ್ರಿಶ್ಚಿಯನ್ ಸಮುದಾಯದ ವಿರುದ್ಧದ ಹಿಂಸಾಚಾರದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಅರ್ಜಿಯನ್ನು ಗುರುವಾರ ವಕೀಲರೊಬ್ಬರು ಪ್ರಸ್ತಾಪಿಸಿದರು. ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಕೋರಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನು ಆಲಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು, “ಸುಪ್ರೀಂ ಕೋರ್ಟ್ ಈ ವಿಷಯದ ವಿಚಾರಣೆಯನ್ನು ವಿಳಂಬ ಮಾಡುತ್ತಿದೆ ಎಂದು ಕೆಲವು ಜಾಲತಾಣಗಳು ವರದಿ ಮಾಡಿರುವುದನ್ನು ನೋಡಿದೆ” ಎಂದು ಉಲ್ಲೇಖಿಸಿದರು.
“ನಾನು ಕೋವಿಡ್ನಿಂದ ಬಳಲುತ್ತಿದ್ದೆ, ಆದ್ದರಿಂದ ವಿಷಯವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುತ್ತಿದೆ ಎಂಬ ಸುದ್ದಿ ಲೇಖನವನ್ನು ನಾನು ಇತ್ತೀಚೆಗೆ ಓದಿದ್ದೇನೆ. ನಮಗೆ ವಿಶ್ರಾಂತಿ ನೀಡಿ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
“ನ್ಯಾಯಾಧೀಶರಲ್ಲಿ ಒಬ್ಬರು ಕೋವಿಡ್ನಿಂದ ಬಳಲುತ್ತಿದ್ದಾರೆ. ಅದಕ್ಕಾಗಿಯೇ ನಾವು ಪ್ರಕರಣ ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ನೀವು ನ್ಯಾಯಾಧೀಶರನ್ನು ಎಷ್ಟು ಗುರಿಯಾಗಿಸಬಹುದು? ಅದಕ್ಕೂ ಮಿತಿಯಿದೆ…. ಅಂತಹ ಸುದ್ದಿಗಳನ್ನು ಯಾರು ಪ್ರಕಟಿಸುತ್ತಿದ್ದಾರೆ?…” ಎಂದು ಕೇಳಿದ್ದಾರೆ.
ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ನಂತರ ಕೆಲವು ನ್ಯೂಸ್ ಪೋರ್ಟಲ್ಗಳು ಜುಲೈ 19ರಂದು ಸುದ್ದಿ ಪ್ರಕಟಿಸಿ, “ಭಾರತದ ಉನ್ನತ ನ್ಯಾಯಾಲಯವು ಕ್ರಿಶ್ಚಿಯನ್ ವಿರೋಧಿ ಹಿಂಸಾಚಾರದ ಅರ್ಜಿಯ ವಿಚಾರಣೆಯಲ್ಲಿ ವಿಳಂಬ ಮಾಡುತ್ತಿದೆ” ಎಂದು ವರದಿ ಮಾಡಿದ್ದವು. ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತು.
ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ವಿರುದ್ಧ ನಡೆದಿರುವ ಹಿಂಸಾಚಾರ ಮತ್ತು ಗುಂಪು ದಾಳಿಗಳನ್ನು ನಿಲ್ಲಿಸಲು ನಿರ್ದೇಶನಗಳನ್ನು ಕೋರಿ ಸುಪ್ರೀಂ ಕೋರ್ಟ್ಗೆ ಏಪ್ರಿಲ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಇದನ್ನೂ ಓದಿರಿ: ಜುಬೇರ್ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್ ದೀಪಕ್ ಗುಪ್ತಾ
ಬೆಂಗಳೂರು ಡಯಾಸಿಸ್ನ ಆರ್ಚ್ಬಿಷಪ್ ಡಾ. ಪೀಟರ್ ಮಚಾಡೊ ಅವರು ನ್ಯಾಷನ್ ಸೊಲಿಡಾರಿಟಿ ಫೋರಮ್, ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾದೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.
ಜುಲೈ 11 ರಂದು, ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರ ಪೀಠವು ಜುಲೈ 15ಕ್ಕೆ ವಿಚಾರಣೆಯನ್ನು ಮುಂದೂಡಿತು. ಆದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕಾರಣ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ.
“ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಧೀಶರ ವಿರುದ್ಧ ವೈಯಕ್ತಿಕ ದಾಳಿ ನಡೆಯುತ್ತಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರು ವಿಷಾದ ವ್ಯಕ್ತಪಡಿಸಿದ್ದರು.


