Homeಮುಖಪುಟನಮಗೂ ಸ್ವಲ್ಪ ವಿರಾಮ ನೀಡಿ, ಜಡ್ಜ್‌ಗಳನ್ನು ಟಾರ್ಗೆಟ್ ಮಾಡಲೂ ಒಂದು ಮಿತಿ ಇದೆ: ಜಸ್ಟೀಸ್ ಚಂದ್ರಚೂಡ್‌

ನಮಗೂ ಸ್ವಲ್ಪ ವಿರಾಮ ನೀಡಿ, ಜಡ್ಜ್‌ಗಳನ್ನು ಟಾರ್ಗೆಟ್ ಮಾಡಲೂ ಒಂದು ಮಿತಿ ಇದೆ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ನ್ಯಾಯಮೂರ್ತಿಗಳ ವಿರುದ್ಧ ವೈಯಕ್ತಿಕ ದಾಳಿ ನಡೆಸುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಕಟುವಾಗಿ ಟೀಕಿಸಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ವಿರುದ್ಧದ ಹಿಂಸಾಚಾರದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಅರ್ಜಿಯನ್ನು ಗುರುವಾರ ವಕೀಲರೊಬ್ಬರು ಪ್ರಸ್ತಾಪಿಸಿದರು. ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಕೋರಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನು ಆಲಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು, “ಸುಪ್ರೀಂ ಕೋರ್ಟ್ ಈ ವಿಷಯದ ವಿಚಾರಣೆಯನ್ನು ವಿಳಂಬ ಮಾಡುತ್ತಿದೆ ಎಂದು ಕೆಲವು ಜಾಲತಾಣಗಳು ವರದಿ ಮಾಡಿರುವುದನ್ನು ನೋಡಿದೆ” ಎಂದು ಉಲ್ಲೇಖಿಸಿದರು.

“ನಾನು ಕೋವಿಡ್‌ನಿಂದ ಬಳಲುತ್ತಿದ್ದೆ, ಆದ್ದರಿಂದ ವಿಷಯವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುತ್ತಿದೆ ಎಂಬ ಸುದ್ದಿ ಲೇಖನವನ್ನು ನಾನು ಇತ್ತೀಚೆಗೆ ಓದಿದ್ದೇನೆ. ನಮಗೆ ವಿಶ್ರಾಂತಿ ನೀಡಿ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ನ್ಯಾಯಾಧೀಶರಲ್ಲಿ ಒಬ್ಬರು ಕೋವಿಡ್‌ನಿಂದ ಬಳಲುತ್ತಿದ್ದಾರೆ. ಅದಕ್ಕಾಗಿಯೇ ನಾವು ಪ್ರಕರಣ ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ನೀವು ನ್ಯಾಯಾಧೀಶರನ್ನು ಎಷ್ಟು ಗುರಿಯಾಗಿಸಬಹುದು? ಅದಕ್ಕೂ ಮಿತಿಯಿದೆ…. ಅಂತಹ ಸುದ್ದಿಗಳನ್ನು ಯಾರು ಪ್ರಕಟಿಸುತ್ತಿದ್ದಾರೆ?…” ಎಂದು ಕೇಳಿದ್ದಾರೆ.

ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ನಂತರ ಕೆಲವು ನ್ಯೂಸ್‌ ಪೋರ್ಟಲ್‌ಗಳು ಜುಲೈ 19ರಂದು ಸುದ್ದಿ ಪ್ರಕಟಿಸಿ, “ಭಾರತದ ಉನ್ನತ ನ್ಯಾಯಾಲಯವು ಕ್ರಿಶ್ಚಿಯನ್ ವಿರೋಧಿ ಹಿಂಸಾಚಾರದ ಅರ್ಜಿಯ ವಿಚಾರಣೆಯಲ್ಲಿ ವಿಳಂಬ ಮಾಡುತ್ತಿದೆ” ಎಂದು ವರದಿ ಮಾಡಿದ್ದವು. ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತು.

ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ವಿರುದ್ಧ ನಡೆದಿರುವ ಹಿಂಸಾಚಾರ ಮತ್ತು ಗುಂಪು ದಾಳಿಗಳನ್ನು ನಿಲ್ಲಿಸಲು ನಿರ್ದೇಶನಗಳನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಏಪ್ರಿಲ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಬೆಂಗಳೂರು ಡಯಾಸಿಸ್‌ನ ಆರ್ಚ್‌ಬಿಷಪ್ ಡಾ. ಪೀಟರ್ ಮಚಾಡೊ ಅವರು ನ್ಯಾಷನ್‌ ಸೊಲಿಡಾರಿಟಿ ಫೋರಮ್‌‌, ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾದೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.

ಜುಲೈ 11 ರಂದು, ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರ ಪೀಠವು ಜುಲೈ 15ಕ್ಕೆ ವಿಚಾರಣೆಯನ್ನು ಮುಂದೂಡಿತು. ಆದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕಾರಣ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ.

“ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಧೀಶರ ವಿರುದ್ಧ ವೈಯಕ್ತಿಕ ದಾಳಿ ನಡೆಯುತ್ತಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರು ವಿಷಾದ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...