Homeಮುಖಪುಟ"ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ": ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

“ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ”: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

- Advertisement -
- Advertisement -

ನಿನ್ನೆ ತಾನೇ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಅಗ್ನಿಪಥ್ ಸೈನಿಕರ ನೇಮಕಾತಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕೇವಲ ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಕೆಲಸ ಬೇಡ ಎಂದು ಪೂರ್ಣ ಪ್ರಮಾಣದ ಸುಭದ್ರ ಉದ್ಯೋಗ ಆಕಾಂಕ್ಷಿಗಳು ಉತ್ತರ ಪ್ರದೇಶದ ಹಲವೆಡೆ ಇಂದು ಪ್ರತಿಭಟನೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಮಂಗಳವಾರ ಹೊಸ ಯೋಜನೆ ಘೋಷಿಸಿದ್ದರು. ಅದರಂತೆ 17.5 ವರ್ಷ ತುಂಬಿದ ಮತ್ತು 21 ವರ್ಷದೊಳಗಿನ 45000 ಯುವಜನರನ್ನು ಭಾರತೀಯ ಸೇನೆಗೆ ಅರೆಕಾಲಿಕ ಸಮಯಕ್ಕೆ ಗುತ್ತಿಗೆ ಆಧಾರಲದಲ್ಲಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದರು. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುವುದು ಮತ್ತು ಅದರಲ್ಲಿ ಕೇವಲ 25% ಸೈನಿಕರಿಗೆ ಮಾತ್ರ ಭತ್ಯೆ-ಸಂಬಳ ಸೌಲಭ್ಯ ನೀಡುವುದಾಗಿ ಉಳಿದ 75% ಜನರು 4 ವರ್ಷಗಳ ಸೇವೆ ಮುಗಿಸಿ ನಿವೃತ್ತರಾಗಬೇಕೆಂದು ಹೇಳಲಾಗಿತ್ತು. ಈ ಯೋಜನೆಗೆ ರಾಷ್ಟ್ರದ್ಯಾಂತದ ಯುವಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಮುಜಾಫರ್‌ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು “ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ವಯೋಮಿತಿಯನ್ನು ಸಹ 21ಕ್ಕೆ ವರ್ಷಕ್ಕೆ ಇಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕಾದಿರುವ ಯುವಜನರು ಏನು ಮಾಡಬೇಕು. ಎರಡು ವರ್ಷಗಳ ಕಾಲ ನೇಮಕಾತಿ ಮಾಡದೇ ಇರುವುದು ಸರ್ಕಾರದ ತಪ್ಪು. ಹಾಗಾಗಿ ವಯೋಮಿತಿಯನ್ನು ಎರಡು ವರ್ಷ ಏರಿಸಿದರೆ ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮನ್ನು ಮೂರ್ಖರನ್ನಾಗಿ ಮಾಡಲಾಗಿದೆ. ನಮ್ಮೊಂದಿಗೆ ಸರ್ಕಾರ ಪಬ್‌ಜಿ ರೀತಿ ಆಡುತ್ತಿದೆ. ಇಷ್ಟು ದಿನ ನೇಮಕಾತಿ ಮಾಡಿಕೊಳ್ಳದಿರುವುದು ಏಕೆ ಎಂದು ಯಾವುದೇ ಬಿಜೆಪಿ ನಾಯಕರು ಹೇಳಿಲ್ಲ. ಈಗ ಇದ್ದಕ್ಕಿದ್ದಂತೆ ಹೊಸ ಯೋಜನೆ ತಂದಿದ್ದಾರೆ. ನಮಗೆ ಭದ್ರತೆಯ ಉದ್ಯೋಗ ಸಿಗುವವರೆಗೂ ಹೋರಾಡುತ್ತೇವೆ ಎಂದು ಪ್ರತಭಟನಾಕಾರರು ಹೇಳಿದ್ದಾರೆ.

ಸರ್ಕಾರವು ಅಗ್ನಿಪಥ್ ಯೋಜನೆಯನ್ನು “ಐತಿಹಾಸಿಕ” ಎಂದು ಕರೆದಿದೆ. ಸುಮಾರು 45,000 ಸೈನಿಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದೆ. ಆ ಮೂಲಕ ಸಂಬಳ ಮತ್ತು ಪಿಂಚಣಿ ಬಿಲ್‌ಗಳ ಹೊರೆ ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತಿದೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, ಜುಲೈ 2023 ರ ವೇಳೆಗೆ ಮೊದಲ ಬ್ಯಾಚ್ ಸಿದ್ಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ಯೋಜನೆಯನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ಅತಿ ದೊಡ್ಡ ಉದ್ಯೋಗದಾತರಾದ “ಭಾರತೀಯ ರೈಲ್ವೇ ಮತ್ತು ಸೈನ್ಯ”ದ ನಾಗರಿಕ ಸೇವೆಯಲ್ಲಿ ಗುತ್ತಿಗೆ ಮತ್ತು ಲ್ಯಾಟರಲ್ ಎಂಟ್ರಿಯ ಹೆಸರಿನಲ್ಲಿ ಉದ್ಯೋಗಗಳನ್ನು ನೀಡಲು ಪ್ರಾರಂಭಿಸಿದರೆ ಯುವಕರು ಏನು ಮಾಡುತ್ತಾರೆ? ಭವಿಷ್ಯದಲ್ಲಿ ಬಿಜೆಪಿಯ ಬಂಡವಾಳಶಾಹಿ ಸ್ನೇಹಿತರ ವ್ಯಾಪಾರದ ನೆಲೆಗಳನ್ನು ಕಾಪಾಡಲು ಯುವಕರು ಕೇವಲ 4 ವರ್ಷಗಳ ಗುತ್ತಿಗೆ ಕೆಲಸವನ್ನು ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...