Homeಮುಖಪುಟ"ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ": ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

“ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ”: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

- Advertisement -
- Advertisement -

ನಿನ್ನೆ ತಾನೇ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಅಗ್ನಿಪಥ್ ಸೈನಿಕರ ನೇಮಕಾತಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕೇವಲ ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಕೆಲಸ ಬೇಡ ಎಂದು ಪೂರ್ಣ ಪ್ರಮಾಣದ ಸುಭದ್ರ ಉದ್ಯೋಗ ಆಕಾಂಕ್ಷಿಗಳು ಉತ್ತರ ಪ್ರದೇಶದ ಹಲವೆಡೆ ಇಂದು ಪ್ರತಿಭಟನೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಮಂಗಳವಾರ ಹೊಸ ಯೋಜನೆ ಘೋಷಿಸಿದ್ದರು. ಅದರಂತೆ 17.5 ವರ್ಷ ತುಂಬಿದ ಮತ್ತು 21 ವರ್ಷದೊಳಗಿನ 45000 ಯುವಜನರನ್ನು ಭಾರತೀಯ ಸೇನೆಗೆ ಅರೆಕಾಲಿಕ ಸಮಯಕ್ಕೆ ಗುತ್ತಿಗೆ ಆಧಾರಲದಲ್ಲಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದರು. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುವುದು ಮತ್ತು ಅದರಲ್ಲಿ ಕೇವಲ 25% ಸೈನಿಕರಿಗೆ ಮಾತ್ರ ಭತ್ಯೆ-ಸಂಬಳ ಸೌಲಭ್ಯ ನೀಡುವುದಾಗಿ ಉಳಿದ 75% ಜನರು 4 ವರ್ಷಗಳ ಸೇವೆ ಮುಗಿಸಿ ನಿವೃತ್ತರಾಗಬೇಕೆಂದು ಹೇಳಲಾಗಿತ್ತು. ಈ ಯೋಜನೆಗೆ ರಾಷ್ಟ್ರದ್ಯಾಂತದ ಯುವಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಮುಜಾಫರ್‌ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು “ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ವಯೋಮಿತಿಯನ್ನು ಸಹ 21ಕ್ಕೆ ವರ್ಷಕ್ಕೆ ಇಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕಾದಿರುವ ಯುವಜನರು ಏನು ಮಾಡಬೇಕು. ಎರಡು ವರ್ಷಗಳ ಕಾಲ ನೇಮಕಾತಿ ಮಾಡದೇ ಇರುವುದು ಸರ್ಕಾರದ ತಪ್ಪು. ಹಾಗಾಗಿ ವಯೋಮಿತಿಯನ್ನು ಎರಡು ವರ್ಷ ಏರಿಸಿದರೆ ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮನ್ನು ಮೂರ್ಖರನ್ನಾಗಿ ಮಾಡಲಾಗಿದೆ. ನಮ್ಮೊಂದಿಗೆ ಸರ್ಕಾರ ಪಬ್‌ಜಿ ರೀತಿ ಆಡುತ್ತಿದೆ. ಇಷ್ಟು ದಿನ ನೇಮಕಾತಿ ಮಾಡಿಕೊಳ್ಳದಿರುವುದು ಏಕೆ ಎಂದು ಯಾವುದೇ ಬಿಜೆಪಿ ನಾಯಕರು ಹೇಳಿಲ್ಲ. ಈಗ ಇದ್ದಕ್ಕಿದ್ದಂತೆ ಹೊಸ ಯೋಜನೆ ತಂದಿದ್ದಾರೆ. ನಮಗೆ ಭದ್ರತೆಯ ಉದ್ಯೋಗ ಸಿಗುವವರೆಗೂ ಹೋರಾಡುತ್ತೇವೆ ಎಂದು ಪ್ರತಭಟನಾಕಾರರು ಹೇಳಿದ್ದಾರೆ.

ಸರ್ಕಾರವು ಅಗ್ನಿಪಥ್ ಯೋಜನೆಯನ್ನು “ಐತಿಹಾಸಿಕ” ಎಂದು ಕರೆದಿದೆ. ಸುಮಾರು 45,000 ಸೈನಿಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದೆ. ಆ ಮೂಲಕ ಸಂಬಳ ಮತ್ತು ಪಿಂಚಣಿ ಬಿಲ್‌ಗಳ ಹೊರೆ ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತಿದೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, ಜುಲೈ 2023 ರ ವೇಳೆಗೆ ಮೊದಲ ಬ್ಯಾಚ್ ಸಿದ್ಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ಯೋಜನೆಯನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ಅತಿ ದೊಡ್ಡ ಉದ್ಯೋಗದಾತರಾದ “ಭಾರತೀಯ ರೈಲ್ವೇ ಮತ್ತು ಸೈನ್ಯ”ದ ನಾಗರಿಕ ಸೇವೆಯಲ್ಲಿ ಗುತ್ತಿಗೆ ಮತ್ತು ಲ್ಯಾಟರಲ್ ಎಂಟ್ರಿಯ ಹೆಸರಿನಲ್ಲಿ ಉದ್ಯೋಗಗಳನ್ನು ನೀಡಲು ಪ್ರಾರಂಭಿಸಿದರೆ ಯುವಕರು ಏನು ಮಾಡುತ್ತಾರೆ? ಭವಿಷ್ಯದಲ್ಲಿ ಬಿಜೆಪಿಯ ಬಂಡವಾಳಶಾಹಿ ಸ್ನೇಹಿತರ ವ್ಯಾಪಾರದ ನೆಲೆಗಳನ್ನು ಕಾಪಾಡಲು ಯುವಕರು ಕೇವಲ 4 ವರ್ಷಗಳ ಗುತ್ತಿಗೆ ಕೆಲಸವನ್ನು ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...