Homeಮುಖಪುಟ"ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ": ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

“ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ”: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

- Advertisement -
- Advertisement -

ನಿನ್ನೆ ತಾನೇ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಅಗ್ನಿಪಥ್ ಸೈನಿಕರ ನೇಮಕಾತಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕೇವಲ ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಕೆಲಸ ಬೇಡ ಎಂದು ಪೂರ್ಣ ಪ್ರಮಾಣದ ಸುಭದ್ರ ಉದ್ಯೋಗ ಆಕಾಂಕ್ಷಿಗಳು ಉತ್ತರ ಪ್ರದೇಶದ ಹಲವೆಡೆ ಇಂದು ಪ್ರತಿಭಟನೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಮಂಗಳವಾರ ಹೊಸ ಯೋಜನೆ ಘೋಷಿಸಿದ್ದರು. ಅದರಂತೆ 17.5 ವರ್ಷ ತುಂಬಿದ ಮತ್ತು 21 ವರ್ಷದೊಳಗಿನ 45000 ಯುವಜನರನ್ನು ಭಾರತೀಯ ಸೇನೆಗೆ ಅರೆಕಾಲಿಕ ಸಮಯಕ್ಕೆ ಗುತ್ತಿಗೆ ಆಧಾರಲದಲ್ಲಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದರು. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುವುದು ಮತ್ತು ಅದರಲ್ಲಿ ಕೇವಲ 25% ಸೈನಿಕರಿಗೆ ಮಾತ್ರ ಭತ್ಯೆ-ಸಂಬಳ ಸೌಲಭ್ಯ ನೀಡುವುದಾಗಿ ಉಳಿದ 75% ಜನರು 4 ವರ್ಷಗಳ ಸೇವೆ ಮುಗಿಸಿ ನಿವೃತ್ತರಾಗಬೇಕೆಂದು ಹೇಳಲಾಗಿತ್ತು. ಈ ಯೋಜನೆಗೆ ರಾಷ್ಟ್ರದ್ಯಾಂತದ ಯುವಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಮುಜಾಫರ್‌ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು “ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ವಯೋಮಿತಿಯನ್ನು ಸಹ 21ಕ್ಕೆ ವರ್ಷಕ್ಕೆ ಇಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕಾದಿರುವ ಯುವಜನರು ಏನು ಮಾಡಬೇಕು. ಎರಡು ವರ್ಷಗಳ ಕಾಲ ನೇಮಕಾತಿ ಮಾಡದೇ ಇರುವುದು ಸರ್ಕಾರದ ತಪ್ಪು. ಹಾಗಾಗಿ ವಯೋಮಿತಿಯನ್ನು ಎರಡು ವರ್ಷ ಏರಿಸಿದರೆ ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮನ್ನು ಮೂರ್ಖರನ್ನಾಗಿ ಮಾಡಲಾಗಿದೆ. ನಮ್ಮೊಂದಿಗೆ ಸರ್ಕಾರ ಪಬ್‌ಜಿ ರೀತಿ ಆಡುತ್ತಿದೆ. ಇಷ್ಟು ದಿನ ನೇಮಕಾತಿ ಮಾಡಿಕೊಳ್ಳದಿರುವುದು ಏಕೆ ಎಂದು ಯಾವುದೇ ಬಿಜೆಪಿ ನಾಯಕರು ಹೇಳಿಲ್ಲ. ಈಗ ಇದ್ದಕ್ಕಿದ್ದಂತೆ ಹೊಸ ಯೋಜನೆ ತಂದಿದ್ದಾರೆ. ನಮಗೆ ಭದ್ರತೆಯ ಉದ್ಯೋಗ ಸಿಗುವವರೆಗೂ ಹೋರಾಡುತ್ತೇವೆ ಎಂದು ಪ್ರತಭಟನಾಕಾರರು ಹೇಳಿದ್ದಾರೆ.

ಸರ್ಕಾರವು ಅಗ್ನಿಪಥ್ ಯೋಜನೆಯನ್ನು “ಐತಿಹಾಸಿಕ” ಎಂದು ಕರೆದಿದೆ. ಸುಮಾರು 45,000 ಸೈನಿಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದೆ. ಆ ಮೂಲಕ ಸಂಬಳ ಮತ್ತು ಪಿಂಚಣಿ ಬಿಲ್‌ಗಳ ಹೊರೆ ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತಿದೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, ಜುಲೈ 2023 ರ ವೇಳೆಗೆ ಮೊದಲ ಬ್ಯಾಚ್ ಸಿದ್ಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ಯೋಜನೆಯನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ಅತಿ ದೊಡ್ಡ ಉದ್ಯೋಗದಾತರಾದ “ಭಾರತೀಯ ರೈಲ್ವೇ ಮತ್ತು ಸೈನ್ಯ”ದ ನಾಗರಿಕ ಸೇವೆಯಲ್ಲಿ ಗುತ್ತಿಗೆ ಮತ್ತು ಲ್ಯಾಟರಲ್ ಎಂಟ್ರಿಯ ಹೆಸರಿನಲ್ಲಿ ಉದ್ಯೋಗಗಳನ್ನು ನೀಡಲು ಪ್ರಾರಂಭಿಸಿದರೆ ಯುವಕರು ಏನು ಮಾಡುತ್ತಾರೆ? ಭವಿಷ್ಯದಲ್ಲಿ ಬಿಜೆಪಿಯ ಬಂಡವಾಳಶಾಹಿ ಸ್ನೇಹಿತರ ವ್ಯಾಪಾರದ ನೆಲೆಗಳನ್ನು ಕಾಪಾಡಲು ಯುವಕರು ಕೇವಲ 4 ವರ್ಷಗಳ ಗುತ್ತಿಗೆ ಕೆಲಸವನ್ನು ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...