Homeಮುಖಪುಟಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

- Advertisement -
- Advertisement -

ಭೀಮ್‌ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೊನೆಗೂ ಹತ್ರಾಸ್ ತಲುಪಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ. ಹತ್ರಾಸ್ ಪ್ರಯಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ಎರಡು ಬಾರಿ ತಡೆದಿದ್ದಾರೆ. ನಂತರ ಅವರು ಕಾರಿನಿಂದಿಳಿದು 5 ಕಿ.ಮೀ ನಡೆದು ಹತ್ರಾಸ್ ತಲುಪಿದ್ದಾರೆ. ಹತ್ರಾಸ್‌ನಲ್ಲಿಯೂ ಪೊಲೀಸರು ಅವರನ್ನು ತಡೆದು ಎಲ್ಲಾ ಕಾರ್ಯಕರ್ತರಿಗೂ ಗ್ರಾಮಕ್ಕೆ ಪ್ರವೇಶವಿಲ್ಲವೆಂಬ ಷರತ್ತು ವಿಧಿಸಿದ್ದಾರೆ.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಬಾಲಕಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ ಧೈರ್ಯತುಂಬಿದ್ದಾರೆ. ನಂತರ ಮಾತನಾಡಿದ ಅವರು “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದಾರೆ.

ಕಂಗನಾ ರಾಣಾವತ್‌ಗೆ ಕೇಂದ್ರ ವೈ ಪ್ಲಸ್ ಭದ್ರತೆ ಒದಗಿಸುವುದಾದರೆ ಈ ಪುಟ್ಟ ಹಳ್ಳಿಯಲ್ಲಿ ದಿನನಿತ್ಯ ನಿಂದನೆಗೊಳಗಾಗುತ್ತಿರುವ ಈ ಕುಟುಂಬಕ್ಕೆ ರಕ್ಷಣೆ ಒದಗಿಸಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್


ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಶಿಕ್ಷೆಯಾಗಬೇಕು. ನಮ್ಮ ಹಕ್ಕೊತ್ತಾಯಗಳು ಈಡೇರದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿಯೇ ತೀರುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಚಂದ್ರಶೇಖರ್ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ನಿಮಗೆ ಎಸ್‌ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ, ಕಾನೂನಿನ ಮೇಲೆ ನಂಬಿಕೆಯಿಲ್ಲದಿದ್ದರೆ ಒಮ್ಮೆ ನನ್ನ ಬಳಿಗೆ ಬಾ ನಿನಗೆ ನಂಬಿಕೆ ತೋರಿಸುತ್ತೇನೆ. ನೀನೇನು ರಾಜಕೀಯ ಮಾಡುತ್ತಿದ್ದೀಯ ಒಮ್ಮೆ ನನ್ನ ಬಳಿಗೆ ಬಾ ತೋರಿಸುತ್ತೇನೆ” ಎಂದು ಆ ಯುವಕ ಕಿರುಚಾಡಿದ್ದಾನೆ. ಆತ ಕುಳಿತುಕೊಂಡು ಈ ಬೆದರಿಕೆ ಹಾಕುತ್ತಿದ್ದರೆ ಅವನ ಹಿಂದೆ ಪೊಲೀಸರು ಕೈಕಟ್ಟಿ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಚಂದ್ರಶೇಖರ್ ಆಜಾದ್ ಕಳೆದೊಂದು ವಾರದಿಂದಲೂ ಹತ್ರಾಸ್ ಅತ್ಯಾಚಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹದಿನೈದು ದಿನದ ಹಿಂದೆಯೇ ಭೀಮ್ ಆರ್ಮಿ ಕಾರ್ಯಕರ್ತರು ಸಂತ್ರಸ್ತ ಕುಟುಂಬ ಮತ್ತು ಸಂತ್ರಸ್ತ ಬಾಲಕಿಯನ್ನು ಭೇಟಿಯಾಗಿ ನ್ಯಾಯಕ್ಕಾಗಿ ದನಿಯತ್ತಿದ್ದರು. ಕೆಲ ದಿನಗಳ ಹಿಂದೆ ಆಜಾದ್‌ರವರನ್ನು ಪೊಲೀಸರು ಗೃಹಬಂಧನದಲ್ಲಿಟ್ಟಿದ್ದರು.


ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....