Homeಮುಖಪುಟಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

- Advertisement -
- Advertisement -

ಭೀಮ್‌ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೊನೆಗೂ ಹತ್ರಾಸ್ ತಲುಪಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ. ಹತ್ರಾಸ್ ಪ್ರಯಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ಎರಡು ಬಾರಿ ತಡೆದಿದ್ದಾರೆ. ನಂತರ ಅವರು ಕಾರಿನಿಂದಿಳಿದು 5 ಕಿ.ಮೀ ನಡೆದು ಹತ್ರಾಸ್ ತಲುಪಿದ್ದಾರೆ. ಹತ್ರಾಸ್‌ನಲ್ಲಿಯೂ ಪೊಲೀಸರು ಅವರನ್ನು ತಡೆದು ಎಲ್ಲಾ ಕಾರ್ಯಕರ್ತರಿಗೂ ಗ್ರಾಮಕ್ಕೆ ಪ್ರವೇಶವಿಲ್ಲವೆಂಬ ಷರತ್ತು ವಿಧಿಸಿದ್ದಾರೆ.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಬಾಲಕಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ ಧೈರ್ಯತುಂಬಿದ್ದಾರೆ. ನಂತರ ಮಾತನಾಡಿದ ಅವರು “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದಾರೆ.

ಕಂಗನಾ ರಾಣಾವತ್‌ಗೆ ಕೇಂದ್ರ ವೈ ಪ್ಲಸ್ ಭದ್ರತೆ ಒದಗಿಸುವುದಾದರೆ ಈ ಪುಟ್ಟ ಹಳ್ಳಿಯಲ್ಲಿ ದಿನನಿತ್ಯ ನಿಂದನೆಗೊಳಗಾಗುತ್ತಿರುವ ಈ ಕುಟುಂಬಕ್ಕೆ ರಕ್ಷಣೆ ಒದಗಿಸಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್


ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಶಿಕ್ಷೆಯಾಗಬೇಕು. ನಮ್ಮ ಹಕ್ಕೊತ್ತಾಯಗಳು ಈಡೇರದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿಯೇ ತೀರುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಚಂದ್ರಶೇಖರ್ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ನಿಮಗೆ ಎಸ್‌ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ, ಕಾನೂನಿನ ಮೇಲೆ ನಂಬಿಕೆಯಿಲ್ಲದಿದ್ದರೆ ಒಮ್ಮೆ ನನ್ನ ಬಳಿಗೆ ಬಾ ನಿನಗೆ ನಂಬಿಕೆ ತೋರಿಸುತ್ತೇನೆ. ನೀನೇನು ರಾಜಕೀಯ ಮಾಡುತ್ತಿದ್ದೀಯ ಒಮ್ಮೆ ನನ್ನ ಬಳಿಗೆ ಬಾ ತೋರಿಸುತ್ತೇನೆ” ಎಂದು ಆ ಯುವಕ ಕಿರುಚಾಡಿದ್ದಾನೆ. ಆತ ಕುಳಿತುಕೊಂಡು ಈ ಬೆದರಿಕೆ ಹಾಕುತ್ತಿದ್ದರೆ ಅವನ ಹಿಂದೆ ಪೊಲೀಸರು ಕೈಕಟ್ಟಿ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಚಂದ್ರಶೇಖರ್ ಆಜಾದ್ ಕಳೆದೊಂದು ವಾರದಿಂದಲೂ ಹತ್ರಾಸ್ ಅತ್ಯಾಚಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹದಿನೈದು ದಿನದ ಹಿಂದೆಯೇ ಭೀಮ್ ಆರ್ಮಿ ಕಾರ್ಯಕರ್ತರು ಸಂತ್ರಸ್ತ ಕುಟುಂಬ ಮತ್ತು ಸಂತ್ರಸ್ತ ಬಾಲಕಿಯನ್ನು ಭೇಟಿಯಾಗಿ ನ್ಯಾಯಕ್ಕಾಗಿ ದನಿಯತ್ತಿದ್ದರು. ಕೆಲ ದಿನಗಳ ಹಿಂದೆ ಆಜಾದ್‌ರವರನ್ನು ಪೊಲೀಸರು ಗೃಹಬಂಧನದಲ್ಲಿಟ್ಟಿದ್ದರು.


ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...