Homeಮುಖಪುಟಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

- Advertisement -
- Advertisement -

ಭೀಮ್‌ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೊನೆಗೂ ಹತ್ರಾಸ್ ತಲುಪಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ. ಹತ್ರಾಸ್ ಪ್ರಯಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ಎರಡು ಬಾರಿ ತಡೆದಿದ್ದಾರೆ. ನಂತರ ಅವರು ಕಾರಿನಿಂದಿಳಿದು 5 ಕಿ.ಮೀ ನಡೆದು ಹತ್ರಾಸ್ ತಲುಪಿದ್ದಾರೆ. ಹತ್ರಾಸ್‌ನಲ್ಲಿಯೂ ಪೊಲೀಸರು ಅವರನ್ನು ತಡೆದು ಎಲ್ಲಾ ಕಾರ್ಯಕರ್ತರಿಗೂ ಗ್ರಾಮಕ್ಕೆ ಪ್ರವೇಶವಿಲ್ಲವೆಂಬ ಷರತ್ತು ವಿಧಿಸಿದ್ದಾರೆ.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಬಾಲಕಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ ಧೈರ್ಯತುಂಬಿದ್ದಾರೆ. ನಂತರ ಮಾತನಾಡಿದ ಅವರು “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದಾರೆ.

ಕಂಗನಾ ರಾಣಾವತ್‌ಗೆ ಕೇಂದ್ರ ವೈ ಪ್ಲಸ್ ಭದ್ರತೆ ಒದಗಿಸುವುದಾದರೆ ಈ ಪುಟ್ಟ ಹಳ್ಳಿಯಲ್ಲಿ ದಿನನಿತ್ಯ ನಿಂದನೆಗೊಳಗಾಗುತ್ತಿರುವ ಈ ಕುಟುಂಬಕ್ಕೆ ರಕ್ಷಣೆ ಒದಗಿಸಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್


ಈ ಗ್ರಾಮದಲ್ಲಿ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆಯಿಲ್ಲ. ಸರ್ಕಾರ ವೈ ಪ್ಲಸ್ ಭದ್ರತೆ ನೀಡದಿದ್ದರೆ ಈ ಕುಟುಂಬ ಸದಸ್ಯರನ್ನು ನನ್ನ ಮನೆಗೆ ಕರೆದುಕೊಂಡು ಹೋಗಿ ನಾನು ರಕ್ಷಣೆ ನೀಡುತ್ತೇನೆ ಎಂದು ಚಂದ್ರಶೇಖರ್ ಆಜಾದ್ ಗುಡುಗಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಶಿಕ್ಷೆಯಾಗಬೇಕು. ನಮ್ಮ ಹಕ್ಕೊತ್ತಾಯಗಳು ಈಡೇರದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿಯೇ ತೀರುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಚಂದ್ರಶೇಖರ್ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ನಿಮಗೆ ಎಸ್‌ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ, ಕಾನೂನಿನ ಮೇಲೆ ನಂಬಿಕೆಯಿಲ್ಲದಿದ್ದರೆ ಒಮ್ಮೆ ನನ್ನ ಬಳಿಗೆ ಬಾ ನಿನಗೆ ನಂಬಿಕೆ ತೋರಿಸುತ್ತೇನೆ. ನೀನೇನು ರಾಜಕೀಯ ಮಾಡುತ್ತಿದ್ದೀಯ ಒಮ್ಮೆ ನನ್ನ ಬಳಿಗೆ ಬಾ ತೋರಿಸುತ್ತೇನೆ” ಎಂದು ಆ ಯುವಕ ಕಿರುಚಾಡಿದ್ದಾನೆ. ಆತ ಕುಳಿತುಕೊಂಡು ಈ ಬೆದರಿಕೆ ಹಾಕುತ್ತಿದ್ದರೆ ಅವನ ಹಿಂದೆ ಪೊಲೀಸರು ಕೈಕಟ್ಟಿ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಚಂದ್ರಶೇಖರ್ ಆಜಾದ್ ಕಳೆದೊಂದು ವಾರದಿಂದಲೂ ಹತ್ರಾಸ್ ಅತ್ಯಾಚಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹದಿನೈದು ದಿನದ ಹಿಂದೆಯೇ ಭೀಮ್ ಆರ್ಮಿ ಕಾರ್ಯಕರ್ತರು ಸಂತ್ರಸ್ತ ಕುಟುಂಬ ಮತ್ತು ಸಂತ್ರಸ್ತ ಬಾಲಕಿಯನ್ನು ಭೇಟಿಯಾಗಿ ನ್ಯಾಯಕ್ಕಾಗಿ ದನಿಯತ್ತಿದ್ದರು. ಕೆಲ ದಿನಗಳ ಹಿಂದೆ ಆಜಾದ್‌ರವರನ್ನು ಪೊಲೀಸರು ಗೃಹಬಂಧನದಲ್ಲಿಟ್ಟಿದ್ದರು.


ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...