Homeಮುಖಪುಟವಿಪಕ್ಷಗಳ ಹೆಸರು ಹೇಳಲು ಪೊಲೀಸರಿಂದ ಒತ್ತಡ: ಸಂಸತ್‌ ಭದ್ರತಾ ಲೋಪ ಆರೋಪಿಗಳಿಂದ ಹೇಳಿಕೆ

ವಿಪಕ್ಷಗಳ ಹೆಸರು ಹೇಳಲು ಪೊಲೀಸರಿಂದ ಒತ್ತಡ: ಸಂಸತ್‌ ಭದ್ರತಾ ಲೋಪ ಆರೋಪಿಗಳಿಂದ ಹೇಳಿಕೆ

- Advertisement -
- Advertisement -

ಸಂಸತ್‌ ಭವನದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ದೆಹಲಿ ಪೊಲೀಸರ ವಿಶೇಷ ಘಟಕದ ವಿರುದ್ದ ನ್ಯಾಯಾಲಯದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪೊಲೀಸರು ನಮಗೆ ವಿದ್ಯುತ್‌ ಶಾಕ್ ಕೊಟ್ಟು ಹಿಂಸಿಸಿದಿದ್ದಾರೆ. ರಾಜಕೀಯ ಪಕ್ಷ (ವಿಪಕ್ಷ) ಗಳ ಜೊತೆ ನಂಟಿದೆ ಎಂದು ಒಪ್ಪಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ, ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ(ಯುಎಪಿಎ)ಯಡಿ  ತಪ್ಪು ಮಾಡಿರುವುದಾಗಿ ಒಪ್ಪಿಕೊಳ್ಳಲು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಆರೋಪಿಗಳಾದ ಮನೋರಂಜನ್ ಡಿ. ಸಾಗರ್‌ ಶರ್ಮ, ಲಲಿತ್‌ ಝಾ, ಅಮೋಲ್ ಶಿಂದೆ ಮತ್ತು ಮಹೇಶ್ ಕುಮಾವತ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರದೀಪ್ ಕೌರ್ ಅವರ ಎದುರು ಪೊಲೀಸರ ವಿರುದ್ದ ಆರೋಪಗಳನ್ನು ಹೊರಿಸಿದ್ದಾರೆ.

ಪೊಲೀಸರು ಸುಮಾರು 70ರಷ್ಟು ಖಾಲಿ ಹಾಲೆಗಳಿಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ. ಪಾಲಿಗ್ರಾಫ್, ನಾರ್ಕೊ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳ ಸಮಯದಲ್ಲಿ ನಮ್ಮಲ್ಲಿ ಇಬ್ಬರಿಗೆ ರಾಜಕೀಯ ಪಕ್ಷಗಳು ಅಥವಾ ನಾಯಕರ ಹೆಸರನ್ನು ಹೇಳುವಂತೆ ಒತ್ತಡ ಹೇರಿದ್ದಾರೆ. ಮೊಬೈಲ್ ನಂಬರ್, ಸಾಮಾಜಿಕ ಮಾಧ್ಯಮ ಮತ್ತು ಇಮೇಲ್ ಖಾತೆಗಳ ಪಾಸ್‌ವರ್ಡ್‌ ಹಾಗೂ ಮೊಬೈಲ್‌ ಫೋನ್‌ಗಳ ಬಯೋಮೆಟ್ರಿಕ್ ಡೇಟಾ ಮತ್ತು ಪಾಸ್‌ವರ್ಡ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ ಎಂದು ಬಂಧಿತರು ಆರೋಪಿಸಿದ್ದಾರೆ.

ಡಿಸೆಂಬರ್ 2023ರಲ್ಲಿ ಸಂಸತ್‌ನ ಚಳಿಗಾಲದ ಅಧಿವೇಶನದ ವೇಳೆ ನಡೆದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಝಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಬಂಧಿಸಲಾಗಿದೆ.

ಈ ಪೈಕಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಲೋಕಸಭೆಯ ಸಾರ್ವಜನಿಕ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಪ್ರದೇಶಕ್ಕೆ ಜಿಗಿದಿದ್ದರು. ನೀಲಮ್ ಆಝಾದ್ ಮತ್ತು ಅಮೋಲ್ ಶಿಂಧೆ ಸಂಸತ್‌ ಭವನದ ಹೊರಗಡೆ ಬಣ್ಣದ ಅನಿಲ ಕ್ಯಾನಿಸ್ಟರ್‌ಗಳನ್ನು ಎರಚಿ ಘೋಷಣೆಗಳನ್ನು ಕೂಗಿದ್ದರು.

ಬುಧವಾರ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ, ನೀಲಂ ಆಝಾದ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಪೊಲೀಸರ ವಿರುದ್ದ ಕಿರುಕುಳ ಮತ್ತು ಒತ್ತಡದ ಆರೋಪ ಹೊರಿಸಿದ್ದಾರೆ. ನ್ಯಾಯಾಲಯವು ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಈ ಕುರಿತು ಪ್ರತಿಕ್ರಿಯೆ ಕೇಳಿದೆ. ಫೆಬ್ರವರಿ 17 ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...