Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...