Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...