Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...