Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...