Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...