Homeಮುಖಪುಟ'ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದ್ಯಾರು..'; ಮೃತ ವಿದ್ಯಾರ್ಥಿ ತಂದೆಯ ಪ್ರಶ್ನೆ

‘ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದ್ಯಾರು..’; ಮೃತ ವಿದ್ಯಾರ್ಥಿ ತಂದೆಯ ಪ್ರಶ್ನೆ

- Advertisement -
- Advertisement -

ಫರಿದಾಬಾದ್‌ನಲ್ಲಿ ಗೋರಕ್ಷಕರು ಗುಂಡಿಕ್ಕಿ ಕೊಂದ ಹದಿಹರೆಯದ ಆರ್ಯನ್ ಮಿಶ್ರಾ ಅವರ ತಂದೆ, ಸಾವಿನ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, “ವಾಹನದಲ್ಲಿದ್ದ ಇತರ ಪ್ರಯಾಣಿಕರು ದಾಳಿಯಲ್ಲಿ ಗಾಯಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿರುವ ಅವರು, ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದವರು ಯಾರು” ಎಂದು ಕೇಳಿದ್ದಾರೆ.

19 ವರ್ಷದ ಆರ್ಯನ್ ಮಿಶ್ರಾ ಆಗಸ್ಟ್ 23 ರ ಮಧ್ಯರಾತ್ರಿಯ ಸುಮಾರಿಗೆ ಹೆದ್ದಾರಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟರು. ಸೌರಭ್, ಅನಿಲ್ ಕೌಶಿಕ್, ವರುಣ್, ಕೃಷ್ಣ ಮತ್ತು ಆದೇಶ್ ಎಂಬ ಸ್ವಯಂ ಘೋಷಿತ ಗೋ ರಕ್ಷಕರು ಕಾರನ್ನು ಹಿಂಬಾಲಿಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಆಗಸ್ಟ್ 28 ರಂದು ಬಂಧಿಸಲಾಯಿತು.

“ಫರಿದಾಬಾದ್‌ನಲ್ಲಿ ನನಗೆ ಏನೂ ಉಳಿದಿಲ್ಲದ ಕಾರಣ ಐದು ಜನರ ಬಂಧನದಿಂದ ನಾನು ತೃಪ್ತಿ ಹೊಂದಿದ್ದೇನೆ. ನಾನು ನನ್ನ ಸ್ವಂತ ಸ್ಥಳಕ್ಕೆ ಮರಳಲು ಬಯಸುತ್ತೇನೆ. ಆದರೆ ಜೊತೆಯಲ್ಲಿದ್ದವರು ಮಾತ್ರ ಉತ್ತರಿಸಬಹುದಾದ ಹಲವು ಪ್ರಶ್ನೆಗಳಿವೆ. ನನ್ನ ಮಗನನ್ನು ಆ ಕಡೆಗೆ ಕಾರಿನಲ್ಲಿ ಆ ಕಡೆಗೆ ಕರೆದೊಯ್ದಿದ್ಯಾಕೆ” ಎಂದು ಪ್ರಶ್ನಿಸಿದ್ದಾರೆ.

ತನ್ನ ಮಗನ ಮೇಲೆ ಗೋರಕ್ಷಕರು ನಿಜವಾಗಿಯೂ ಗುಂಡು ಹಾರಿಸಿದ್ದಾರೆಯೇ ಎಂದು ಪ್ರಶ್ನಿಸಿದ ಮಿಶ್ರಾ, “ಅವರಿಗೆ ಆ ಹಕ್ಕು ನೀಡಿದವರು ಯಾರು” ಎಂದಿದ್ದಾರೆ.

“ನನ್ನ ಮಗನನ್ನು ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಕೊಲ್ಲಲಾಗಿದೆ ಎಂದು ಅನಿಲ್ ಕೌಶಿಕ್ ಪೊಲೀಸರಿಗೆ ತಿಳಿಸಿದ್ದಾರೆ; ಅವನು ಹೇಳಿದ್ದು ಸರಿಯಿದ್ದರೆ, ಗೋರಕ್ಷಕರಿಗೆ ಯಾರನ್ನಾದರೂ ಗುಂಡು ಹಾರಿಸುವ ಹಕ್ಕನ್ನು ನೀಡಿದವರು ಯಾರು? ನನ್ನ ಮಗ ಹಿಂತಿರುಗುವುದಿಲ್ಲ. ಆದರೆ, ಈ ವಿಷಯದ ಕುರಿತು ಗಂಭೀರವಾಗಿ ತನಿಖೆ ನಡೆಸುವುದು ಅಗತ್ಯವಿದೆ” ಎಂದರು.

ಆರ್ಯನ್ ಅವರ ಸಹೋದರ ಹತ್ಯೆಯಲ್ಲಿ ನ್ಯಾಯ ಕೇಳಲು “ನ್ಯಾಯ್” ಎಂಬ ವಾಟ್ಸಾಪ್ ಗುಂಪನ್ನು ಪ್ರಾರಂಭಿಸಿದ್ದಾರೆ. ಮಂಗಳವಾರ ರಾತ್ರಿ ರಚಿಸಲಾದ ಗುಂಪಿಗೆ 1,000 ಕ್ಕೂ ಹೆಚ್ಚು ಜನರು ಸೇರಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆಗಸ್ಟ್ 23 ರ ರಾತ್ರಿ ಎರಡು ಎಸ್‌ಯುವಿಗಳನ್ನು ಚಾಲನೆ ಮಾಡುವ ಕೆಲವು ಶಂಕಿತ ಜಾನುವಾರು ಕಳ್ಳಸಾಗಣೆದಾರರು ನಗರದಲ್ಲಿ ವಿಹಾರ ನಡೆಸುತ್ತಿರುವ ಬಗ್ಗೆ ತಮಗೆ ಮಾಹಿತಿ ಸಿಕ್ಕಿತ್ತು ಎಂದು ಆರೋಪಿಗಳು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ.

ಅವರು ಆರ್ಯನ್ ಮತ್ತು ಅವರ ಸ್ನೇಹಿತರಾದ ಶಾಂಕಿ, ಹರ್ಷಿತ್ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಎಂದು ತಪ್ಪಾಗಿ ಗ್ರಹಿಸಿದರು. ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಧಪುರಿ ಟೋಲ್ ಬಳಿ ಸುಮಾರು 30 ಕಿಲೋಮೀಟರ್ ಅವರ ಕಾರನ್ನು ಹಿಂಬಾಲಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅವರು ತಮ್ಮ ಕಾರನ್ನು ನಿಲ್ಲಿಸಲು ಹುಡುಗ ಮತ್ತು ಅವನ ಸ್ನೇಹಿತರನ್ನು ಕೇಳಿದಾಗ, ಚಾಲಕನು ವೇಗವಾಗಿ ಓಡಿಸಲು ಪ್ರಾರಂಭಿಸಿದನು, ಅದನ್ನು ಅನುಸರಿಸಿ ಅವರು ಗುಂಡು ಹಾರಿಸಿದರು ಮತ್ತು ಪಲ್ವಾಲ್‌ನ ಗಧಪುರಿ ಟೋಲ್ ಬಳಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದರು.

ಪೊಲೀಸರು ಆಗಸ್ಟ್ 28 ರಂದು ಐವರನ್ನು ಬಂಧಿಸಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಕಮಿಷನರ್ (ಅಪರಾಧ) ಅಮನ್ ಯಾದವ್ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಪರಾಧ ವಿಭಾಗದ ಡಿಸಿಪಿ ಹೇಮೇಂದ್ರ ಕುಮಾರ್ ಮೀನಾ ಮಾತನಾಡಿ, ಈ ಪ್ರಕರಣದ ಹಲವು ಅಂಶಗಳು ಇನ್ನೂ ಬಗೆಹರಿದಿಲ್ಲ, ಆರೋಪಿಗಳ ವಿಚಾರಣೆ ವೇಳೆ ಬೆಳಕಿಗೆ ಬಂದಿರುವ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ, ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು, ಏನಾದರೂ ಸರಿಯಾಗಿ ಹೇಳಲು ಮುಂದಾಗುವುದಿಲ್ಲ. ಈಗ ಪೊಲೀಸರು ಶೀಘ್ರದಲ್ಲೇ ಪ್ರಕರಣವನ್ನು ಬಹಿರಂಗಪಡಿಸುತ್ತಾರೆ ಎಂದರು.

ಇದನ್ನೂ ಒದಿ; ಹರ್ಯಾಣ: ದನ ಕಳ್ಳ ಸಾಗಣೆದಾರನೆಂದು ಭಾವಿಸಿ 12ನೇ ತರಗತಿ ವಿದ್ಯಾರ್ಥಿಯನ್ನು ಹತ್ಯೆಗೈದ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...