Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...