Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...