Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...