Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...