Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...