Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...