Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...