Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...