Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...