Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...