Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...