Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...