Homeಮುಖಪುಟಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ನೀಡುವುದು 'ಕಾರ್ಯಸಾಧು'ವಲ್ಲ: ಕೃಷಿ ಅರ್ಥಶಾಸ್ತ್ರಜ್ಞ ಜೋಲ್

ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧು’ವಲ್ಲ: ಕೃಷಿ ಅರ್ಥಶಾಸ್ತ್ರಜ್ಞ ಜೋಲ್

- Advertisement -
- Advertisement -

ರೈತರ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಮತ್ತು ಬೆಲೆ ವ್ಯವಸ್ಥೆ ಸೇರಿದಂತೆ ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ.ಸರ್ದಾರಾ ಸಿಂಗ್ ಜೋಲ್ ಅವರು, ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧು’ವಲ್ಲ’ ಎಂದು ಹೇಳಿದ್ದಾರೆ.

ಪಂಜಾಬ್ ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಯಾದ ಡಾ.ಜೋಲ್, ‘ರೈತರು ತಮ್ಮ ಬೇಡಿಕೆಗಳ ಬಗ್ಗೆ ಸಂಧಾನದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಮತ್ತು ದೆಹಲಿಗೆ ಹೋಗಲು ಅವರಿಗೆ ಅವಕಾಶ ನೀಡಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ಮಾತುಕತೆಗೆ ನಡೆಸಬೇಕು’ ಎಂದು ಹೇಳಿದ್ದಾರೆ.

ಹರಿಯಾಣ- ಪಂಜಾಬ್‌ನ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ  ಕಳವಳ ವ್ಯಕ್ತಪಡಿಸಿದ ಅವರು, ‘ಎಂಎಸ್‌ಪಿ ಮಾರುಕಟ್ಟೆ ದರಕ್ಕಿಂತ ಹೆಚ್ಚಾದಾಗ ಮಾತ್ರ ರೈತರಿಗೆ ಅನುಕೂಲವಾಗುತ್ತದೆ. ಎಂದು ಹೇಳಿದ ಡಾ.ಜೊಹ್ಲ್, ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ಅಗತ್ಯವನ್ನು ಒತ್ತಿ ಹೇಳಿದರು.

‘ರೈತರು ಹೆಚ್ಚಾಗಿ ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿ ಪಡೆಯುತ್ತಾರೆ; ಸರ್ಕಾರವು ಅನೇಕ ಬೆಳೆಗಳನ್ನು ಖರೀದಿಸುವುದಿಲ್ಲ. ಸರ್ಕಾರವು ಎಲ್ಲ 23 ಬೆಳೆಗಳಿಗೆ ಎಂಎಸ್‌ಪಿ ನೀಡಲು ಸಾಧ್ಯವಿಲ್ಲ…. ಸರ್ಕಾರವು ಹಣ ಉಳಿಸಿ ಎಲ್ಲಾ ಬೆಳೆಗಳನ್ನು ಖರೀದಿಸಿದರೂ ಅದನ್ನು ಜಾರಿಗೆ ತರಲು ಸಾಧ್ಯವಿಲ್ಲ’ ಎಂದು ಡಾ.ಜೋಲ್ ಹೇಳಿದರು.

‘ಪ್ರಪಂಚದ ಸುಮಾರು 60 ದೇಶಗಳು ರೈತರಿಗೆ ನೇರ ಸಬ್ಸಿಡಿಗಳನ್ನು ನೀಡುತ್ತವೆ. 2021-22 ರಲ್ಲಿ ಯುನೈಟೆಡ್ ಸ್ಟೇಟ್ಸ್ ರೈತರಿಗೆ 42 ಶತಕೋಟಿ ಡಾಲರ್‌ಗಿಂತ ಹೆಚ್ಚಿನದನ್ನು ನೀಡಿದೆ. ಚೀನಾ ಮತ್ತು ಜಪಾನ್ ಕೂಡ ತಮ್ಮ ರೈತರಿಗೆ ಸಬ್ಸಿಡಿ ನೀಡುತ್ತವೆ’ ಎಂದು ಅವರು ಹೇಳಿದರು.

ಸ್ವಾಮಿನಾಥನ್ ಸಮಿತಿ ವರದಿ ಕುರಿತು ಮಾತನಾಡಿದ ಅವರು, ‘ರೈತನಿಗೆ ವ್ಯಾಪಾರ ಕೊರತೆಯಾಗಬಾರದು ಎಂಬುದು ಎಂಎಸ್‌ಪಿಯ ಉದ್ದೇಶವಾಗಿದೆ. ಎಲ್ಲಿಯವರೆಗೆ ವಿದ್ಯುತ್ ಮತ್ತು ನೀರು ಮುಕ್ತವಾಗಿರುವುದಿಲ್ಲವೋ ಅಲ್ಲಿಯವರೆಗೆ ಅದು ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...