Homeಮುಖಪುಟಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ನೀಡುವುದು 'ಕಾರ್ಯಸಾಧು'ವಲ್ಲ: ಕೃಷಿ ಅರ್ಥಶಾಸ್ತ್ರಜ್ಞ ಜೋಲ್

ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧು’ವಲ್ಲ: ಕೃಷಿ ಅರ್ಥಶಾಸ್ತ್ರಜ್ಞ ಜೋಲ್

- Advertisement -
- Advertisement -

ರೈತರ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಮತ್ತು ಬೆಲೆ ವ್ಯವಸ್ಥೆ ಸೇರಿದಂತೆ ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ.ಸರ್ದಾರಾ ಸಿಂಗ್ ಜೋಲ್ ಅವರು, ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧು’ವಲ್ಲ’ ಎಂದು ಹೇಳಿದ್ದಾರೆ.

ಪಂಜಾಬ್ ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಯಾದ ಡಾ.ಜೋಲ್, ‘ರೈತರು ತಮ್ಮ ಬೇಡಿಕೆಗಳ ಬಗ್ಗೆ ಸಂಧಾನದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಮತ್ತು ದೆಹಲಿಗೆ ಹೋಗಲು ಅವರಿಗೆ ಅವಕಾಶ ನೀಡಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ಮಾತುಕತೆಗೆ ನಡೆಸಬೇಕು’ ಎಂದು ಹೇಳಿದ್ದಾರೆ.

ಹರಿಯಾಣ- ಪಂಜಾಬ್‌ನ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ  ಕಳವಳ ವ್ಯಕ್ತಪಡಿಸಿದ ಅವರು, ‘ಎಂಎಸ್‌ಪಿ ಮಾರುಕಟ್ಟೆ ದರಕ್ಕಿಂತ ಹೆಚ್ಚಾದಾಗ ಮಾತ್ರ ರೈತರಿಗೆ ಅನುಕೂಲವಾಗುತ್ತದೆ. ಎಂದು ಹೇಳಿದ ಡಾ.ಜೊಹ್ಲ್, ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ಅಗತ್ಯವನ್ನು ಒತ್ತಿ ಹೇಳಿದರು.

‘ರೈತರು ಹೆಚ್ಚಾಗಿ ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿ ಪಡೆಯುತ್ತಾರೆ; ಸರ್ಕಾರವು ಅನೇಕ ಬೆಳೆಗಳನ್ನು ಖರೀದಿಸುವುದಿಲ್ಲ. ಸರ್ಕಾರವು ಎಲ್ಲ 23 ಬೆಳೆಗಳಿಗೆ ಎಂಎಸ್‌ಪಿ ನೀಡಲು ಸಾಧ್ಯವಿಲ್ಲ…. ಸರ್ಕಾರವು ಹಣ ಉಳಿಸಿ ಎಲ್ಲಾ ಬೆಳೆಗಳನ್ನು ಖರೀದಿಸಿದರೂ ಅದನ್ನು ಜಾರಿಗೆ ತರಲು ಸಾಧ್ಯವಿಲ್ಲ’ ಎಂದು ಡಾ.ಜೋಲ್ ಹೇಳಿದರು.

‘ಪ್ರಪಂಚದ ಸುಮಾರು 60 ದೇಶಗಳು ರೈತರಿಗೆ ನೇರ ಸಬ್ಸಿಡಿಗಳನ್ನು ನೀಡುತ್ತವೆ. 2021-22 ರಲ್ಲಿ ಯುನೈಟೆಡ್ ಸ್ಟೇಟ್ಸ್ ರೈತರಿಗೆ 42 ಶತಕೋಟಿ ಡಾಲರ್‌ಗಿಂತ ಹೆಚ್ಚಿನದನ್ನು ನೀಡಿದೆ. ಚೀನಾ ಮತ್ತು ಜಪಾನ್ ಕೂಡ ತಮ್ಮ ರೈತರಿಗೆ ಸಬ್ಸಿಡಿ ನೀಡುತ್ತವೆ’ ಎಂದು ಅವರು ಹೇಳಿದರು.

ಸ್ವಾಮಿನಾಥನ್ ಸಮಿತಿ ವರದಿ ಕುರಿತು ಮಾತನಾಡಿದ ಅವರು, ‘ರೈತನಿಗೆ ವ್ಯಾಪಾರ ಕೊರತೆಯಾಗಬಾರದು ಎಂಬುದು ಎಂಎಸ್‌ಪಿಯ ಉದ್ದೇಶವಾಗಿದೆ. ಎಲ್ಲಿಯವರೆಗೆ ವಿದ್ಯುತ್ ಮತ್ತು ನೀರು ಮುಕ್ತವಾಗಿರುವುದಿಲ್ಲವೋ ಅಲ್ಲಿಯವರೆಗೆ ಅದು ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...