Homeಮುಖಪುಟಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಕುಸ್ತಿ ತ್ಯಜಿಸುವುದಾಗಿ ಘೋಷಿಸಿರುವ ಒಲಿಂಪಿಕ್ ಪದಕ ವಿಜೇತೆ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್, ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಭಾರತ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಂತರ ಇಂದು ನಡೆದ ಚುನಾವಣೆಯಲ್ಲಿ ಆತನ ಆಪ್ತ ಉನ್ನತ ಹುದ್ದೆಗೆ ಆಯ್ಕೆಯಾಗಿದ್ದಾರೆ. ಬ್ರಿಜ್ ಭೂಷಣ್ ಅವರು 12 ವರ್ಷಗಳ ಕಾಲ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿದ್ದರು. ಈಗ ಆಯ್ಕೆಯಾಗಿರುವ ಸಂಜಯ್ ಸಿಂಗ್ ಹಲವು ವರ್ಷಗಳಿಂದ ಭೂಷಣ್‌ಗೆ ಆಪ್ತರಾಗಿದ್ದಾರೆ. ಉತ್ತರ ಪ್ರದೇಶದಿಂದ ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಮಲಿಕ್ ಸೇರಿದಂತೆ ಪ್ರಮುಖ ಆಟಗಾರರು ಗಂಭೀರ ಆರೋಪ ಮಾಡಿ, ಹಲವು ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಶನ ನಡೆಸಿದ್ದರು.

ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಪ್ರತಿಭಟನಾನಿರತ ಕುಸ್ತಿಪಟುಗಳ ಅಭ್ಯರ್ಥಿಯಾಗಿದ್ದ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದರು. ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ ಫೋಗಟ್ ಮತ್ತು ಬಜರಂಗ್ ಪುನಿಯಾ ಫಲಿತಾಂಶದ ಬಗ್ಗೆ ತಮ್ಮ ನಿರಾಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ ಫೋಗಟ್, ‘ಈಗ ಸಂಜಯ್ ಸಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ. ದೇಶದಲ್ಲಿ ನ್ಯಾಯವನ್ನು ಹೇಗೆ ಹುಡುಕಬೇಕು ಎಂದು ನನಗೆ ತಿಳಿಯುತ್ತಿಲ್ಲ. ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಲಂಪಿಕ್ ಕಂಚಿನ ಪದಕ ವಿಜೇತ ಭಜರಂಗ್ ಪುನಿಯಾ ಮಾತನಾಡಿ, ‘ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರಾದೃಷ್ಟಕರ. ನಾವು ಯಾವುದೇ ಪಕ್ಷದೊಂದಿಗೆ ನಂಟು ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ, ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ, ಇಂದು ಬ್ರಿಜ್ ಭೂಷಣ್ ಸಿಂಗ್ ಅವರ ಸಹಾಯಕ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾರೆ’ ಎಂದು ಹೇಳಿದರು.

ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಸಾಕ್ಷಿ, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲೆ ಇರಿಸಿದರು.

ಇದೆ ವರ್ಷದ ಜನವರಿಯಲ್ಲಿ, ಮೂವರು ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಬ್ರಿಜ್ ಭೂಷಣ್ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಸರ್ಕಾರ ತನಿಖೆಗೆ ಆದೇಶಿಸಿದ ನಂತರ ಅವರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು. ‘ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಯಾವುದೇ ಸಹಾಯಕ ಅಥವಾ ಸಂಬಂಧಿಗೆ ಕುಸ್ತಿ ಸಂಸ್ಥೆಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಕುಸ್ತಿಪಟುಗಳಿಗೆ ಭರವಸೆ ನೀಡಲಾಗಿತ್ತು. ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಮತ್ತು ಅಳಿಯ ವಿಶಾಲ್ ಸಿಂಗ್ ಚುನಾವಣಾ ಸ್ಪರ್ಧೆಗೆ ಪ್ರವೇಶಿಸದಿದ್ದರೂ, ಅವರ ಸಹಾಯಕ ಸಂಜಯ್ ಸಿಂಗ್ ಅವರ ನಾಮಪತ್ರವನ್ನು ಸಿಂಧುಗೊಳಿಸಲಾಗಿದೆ.

ಸಂಜಯ್ ಸಿಂಗ್ ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಡಬ್ಯೂಎಫ್ಐನ ಹಿಂದಿನ ಕಾರ್ಯಕಾರಿ ಮಂಡಳಿಯ ಭಾಗವಾಗಿದ್ದರು, ಜತೆಗೆ, 2019 ರಿಂದ ಸಂಸ್ಥೆಯ ಜಂಟಿ ಕಾರ್ಯದರ್ಶಿಯಾಗಿದ್ದರು.

ಇಂದಿನ ಚುನಾವಣೆಯಲ್ಲಿ ತಮ್ಮ ಗೆಲುವಿನ ನಂತರ ಮಾತನಾಡಿದ ಸಂಜಯ್ ಸಿಂಗ್, ‘ಇದು ಸುಳ್ಳಿನ ಮೇಲೆ ಸತ್ಯದ ಗೆಲುವು. ಆ ಪ್ರವೃತ್ತಿಗಳಿಗೆ ಸ್ಥಾನವಿಲ್ಲದ ವ್ಯಕ್ತಿಯ (ಬ್ರಿಜ್ ಭೂಷಣ್) ವಿರುದ್ಧ ಅವರು (ಕುಸ್ತಿ ಪಟುಗಳು) ಇಂತಹ ಆರೋಪಗಳನ್ನು ಮಾಡಿದ್ದಾರೆ’ ಎಂದು ಹೇಳಿದರು.

ನೀವು ಬಿಜೆಪಿ ಸಂಸದರಿಗೆ ನಿಕಟವಾಗಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಖಂಡಿತವಾಗಿ, ನಾನು ಅವರಿಗೆ ಹತ್ತಿರವಾಗಿದ್ದೇನೆ’ ಎಂದು ಹೇಳಿದರು. ಫೆಡರೇಶನ್ ಈಗ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಕುಸ್ತಿಪಟುಗಳ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದ್ದಕ್ಕೆ, ‘ಯಾವುದೇ ಮಹಿಳಾ ಕುಸ್ತಿಪಟುಗಳ ವಿರುದ್ಧ ಯಾವುದೇ ಅನ್ಯಾಯವಾಗುವುದಿಲ್ಲ’ ಎಂದು ಹೇಳಿದರು.

ಸಂಜಯ್ ಸಿಂಗ್ ಅವರ ವಿಜಯದ ಕುರಿತು ಮಾತನಾಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್, ‘ನಾನು ದೇಶದ ಕುಸ್ತಿಪಟುಗಳಿಗೆ ಮತ್ತು ಡಬ್ಲ್ಯೂಎಫ್ಐ ಕಾರ್ಯದರ್ಶಿಗೆ ಜಯದ ಶ್ರೇಯವನ್ನು ನೀಡಲು ಬಯಸುತ್ತೇನೆ. ಹೊಸ ಒಕ್ಕೂಟದ ರಚನೆಯ ನಂತರ, ಕುಸ್ತಿ ಪಂದ್ಯಗಳು ಪುನರಾರಂಭಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ’ ಎಂದರು.

ಇದನ್ನೂ ಓದಿ; ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...