Homeಮುಖಪುಟಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಕುಸ್ತಿ ತ್ಯಜಿಸುವುದಾಗಿ ಘೋಷಿಸಿರುವ ಒಲಿಂಪಿಕ್ ಪದಕ ವಿಜೇತೆ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್, ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಭಾರತ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಂತರ ಇಂದು ನಡೆದ ಚುನಾವಣೆಯಲ್ಲಿ ಆತನ ಆಪ್ತ ಉನ್ನತ ಹುದ್ದೆಗೆ ಆಯ್ಕೆಯಾಗಿದ್ದಾರೆ. ಬ್ರಿಜ್ ಭೂಷಣ್ ಅವರು 12 ವರ್ಷಗಳ ಕಾಲ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿದ್ದರು. ಈಗ ಆಯ್ಕೆಯಾಗಿರುವ ಸಂಜಯ್ ಸಿಂಗ್ ಹಲವು ವರ್ಷಗಳಿಂದ ಭೂಷಣ್‌ಗೆ ಆಪ್ತರಾಗಿದ್ದಾರೆ. ಉತ್ತರ ಪ್ರದೇಶದಿಂದ ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಮಲಿಕ್ ಸೇರಿದಂತೆ ಪ್ರಮುಖ ಆಟಗಾರರು ಗಂಭೀರ ಆರೋಪ ಮಾಡಿ, ಹಲವು ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಶನ ನಡೆಸಿದ್ದರು.

ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಪ್ರತಿಭಟನಾನಿರತ ಕುಸ್ತಿಪಟುಗಳ ಅಭ್ಯರ್ಥಿಯಾಗಿದ್ದ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದರು. ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ ಫೋಗಟ್ ಮತ್ತು ಬಜರಂಗ್ ಪುನಿಯಾ ಫಲಿತಾಂಶದ ಬಗ್ಗೆ ತಮ್ಮ ನಿರಾಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ ಫೋಗಟ್, ‘ಈಗ ಸಂಜಯ್ ಸಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ. ದೇಶದಲ್ಲಿ ನ್ಯಾಯವನ್ನು ಹೇಗೆ ಹುಡುಕಬೇಕು ಎಂದು ನನಗೆ ತಿಳಿಯುತ್ತಿಲ್ಲ. ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಲಂಪಿಕ್ ಕಂಚಿನ ಪದಕ ವಿಜೇತ ಭಜರಂಗ್ ಪುನಿಯಾ ಮಾತನಾಡಿ, ‘ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರಾದೃಷ್ಟಕರ. ನಾವು ಯಾವುದೇ ಪಕ್ಷದೊಂದಿಗೆ ನಂಟು ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ, ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ, ಇಂದು ಬ್ರಿಜ್ ಭೂಷಣ್ ಸಿಂಗ್ ಅವರ ಸಹಾಯಕ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾರೆ’ ಎಂದು ಹೇಳಿದರು.

ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಸಾಕ್ಷಿ, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲೆ ಇರಿಸಿದರು.

ಇದೆ ವರ್ಷದ ಜನವರಿಯಲ್ಲಿ, ಮೂವರು ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಬ್ರಿಜ್ ಭೂಷಣ್ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಸರ್ಕಾರ ತನಿಖೆಗೆ ಆದೇಶಿಸಿದ ನಂತರ ಅವರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು. ‘ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಯಾವುದೇ ಸಹಾಯಕ ಅಥವಾ ಸಂಬಂಧಿಗೆ ಕುಸ್ತಿ ಸಂಸ್ಥೆಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಕುಸ್ತಿಪಟುಗಳಿಗೆ ಭರವಸೆ ನೀಡಲಾಗಿತ್ತು. ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಮತ್ತು ಅಳಿಯ ವಿಶಾಲ್ ಸಿಂಗ್ ಚುನಾವಣಾ ಸ್ಪರ್ಧೆಗೆ ಪ್ರವೇಶಿಸದಿದ್ದರೂ, ಅವರ ಸಹಾಯಕ ಸಂಜಯ್ ಸಿಂಗ್ ಅವರ ನಾಮಪತ್ರವನ್ನು ಸಿಂಧುಗೊಳಿಸಲಾಗಿದೆ.

ಸಂಜಯ್ ಸಿಂಗ್ ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಡಬ್ಯೂಎಫ್ಐನ ಹಿಂದಿನ ಕಾರ್ಯಕಾರಿ ಮಂಡಳಿಯ ಭಾಗವಾಗಿದ್ದರು, ಜತೆಗೆ, 2019 ರಿಂದ ಸಂಸ್ಥೆಯ ಜಂಟಿ ಕಾರ್ಯದರ್ಶಿಯಾಗಿದ್ದರು.

ಇಂದಿನ ಚುನಾವಣೆಯಲ್ಲಿ ತಮ್ಮ ಗೆಲುವಿನ ನಂತರ ಮಾತನಾಡಿದ ಸಂಜಯ್ ಸಿಂಗ್, ‘ಇದು ಸುಳ್ಳಿನ ಮೇಲೆ ಸತ್ಯದ ಗೆಲುವು. ಆ ಪ್ರವೃತ್ತಿಗಳಿಗೆ ಸ್ಥಾನವಿಲ್ಲದ ವ್ಯಕ್ತಿಯ (ಬ್ರಿಜ್ ಭೂಷಣ್) ವಿರುದ್ಧ ಅವರು (ಕುಸ್ತಿ ಪಟುಗಳು) ಇಂತಹ ಆರೋಪಗಳನ್ನು ಮಾಡಿದ್ದಾರೆ’ ಎಂದು ಹೇಳಿದರು.

ನೀವು ಬಿಜೆಪಿ ಸಂಸದರಿಗೆ ನಿಕಟವಾಗಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಖಂಡಿತವಾಗಿ, ನಾನು ಅವರಿಗೆ ಹತ್ತಿರವಾಗಿದ್ದೇನೆ’ ಎಂದು ಹೇಳಿದರು. ಫೆಡರೇಶನ್ ಈಗ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಕುಸ್ತಿಪಟುಗಳ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದ್ದಕ್ಕೆ, ‘ಯಾವುದೇ ಮಹಿಳಾ ಕುಸ್ತಿಪಟುಗಳ ವಿರುದ್ಧ ಯಾವುದೇ ಅನ್ಯಾಯವಾಗುವುದಿಲ್ಲ’ ಎಂದು ಹೇಳಿದರು.

ಸಂಜಯ್ ಸಿಂಗ್ ಅವರ ವಿಜಯದ ಕುರಿತು ಮಾತನಾಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್, ‘ನಾನು ದೇಶದ ಕುಸ್ತಿಪಟುಗಳಿಗೆ ಮತ್ತು ಡಬ್ಲ್ಯೂಎಫ್ಐ ಕಾರ್ಯದರ್ಶಿಗೆ ಜಯದ ಶ್ರೇಯವನ್ನು ನೀಡಲು ಬಯಸುತ್ತೇನೆ. ಹೊಸ ಒಕ್ಕೂಟದ ರಚನೆಯ ನಂತರ, ಕುಸ್ತಿ ಪಂದ್ಯಗಳು ಪುನರಾರಂಭಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ’ ಎಂದರು.

ಇದನ್ನೂ ಓದಿ; ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...