Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಮತ್ತು ತಾರತಮ್ಯದಿಂದ ಕೂಡಿದೆ ಎಂದಿದೆ.

ಪ್ಯಾಲೆಸ್ತೀನ್ ಅಥಾರಿಟಿ

ಪ್ಯಾಲೆಸ್ತೀನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊಸ ಕಾನೂನನ್ನು ‘ಅಪಾಯಕಾರಿ ಬೆಳವಣಿಗೆ’ ಎಂದು ಬಣ್ಣಿಸಿದೆ. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಸಚಿವಾಲಯವು, “ಆಕ್ರಮಿತ ಪ್ಯಾಲೆಸ್ತೀನ್’ ಭೂಪ್ರದೇಶದ ಮೇಲೆ ಇಸ್ರೇಲ್‌ಗೆ ಯಾವುದೇ ಸಾರ್ವಭೌಮತ್ವವಿಲ್ಲ” ಎಂದು ಒತ್ತಿ ಹೇಳಿದೆ.

“ಹೊಸ ಕಾನೂನು ಮತ್ತೊಮ್ಮೆ ಇಸ್ರೇಲಿ ವಸಾಹತುಶಾಹಿ ವ್ಯವಸ್ಥೆಯ ಮುಖವನ್ನು ಬಯಲು ಮಾಡಿದೆ. ಇದು ಶಾಸಕಾಂಗದ ರಕ್ಷಣೆಯಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ಕಾನೂನುಬದ್ಧಗೊಳಿಸಲು ಪ್ರಯತ್ನಿಸುತ್ತಿದೆ” ಎಂದಿದೆ.

ಹಮಾಸ್

ಮರಣದಂಡನೆ ಕಾನೂನಿನ ಅಂಗೀಕಾರವು ಇಸ್ರೇಲ್ ಜೈಲುಗಳಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಯರ ‘ಜೀವಕ್ಕೆ ಬೆದರಿಕೆ ಒಡ್ಡುವ ಅಪಾಯಕಾರಿ ಮುನ್ಸೂಚನೆ’ ಎಂದು ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಗುಂಪು ಹಮಾಸ್ ಟೀಕಿಸಿದೆ.

“ಇಸ್ರೇಲ್ ಸರ್ಕಾರಕ್ಕೆ ಅಂತಾರಾಷ್ಟ್ರೀಯ ಕಾನೂನುಗಳ ಮೇಲೆ ಗೌರವವಿಲ್ಲ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಕಾಳಜಿಯಿಲ್ಲ ಎಂಬುವುದು ಈ ನಿರ್ಧಾರದಿಂದ ಮತ್ತೊಮ್ಮೆ ಸಾಬೀತಾಗಿದೆ” ಎಂದು ಹಮಾಸ್ ಹೇಳಿದೆ.

ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯವು, ಇಸ್ರೇಲ್‌ನ ಕ್ರೌರ್ಯದಿಂದ ಪ್ಯಾಲೆಸ್ತೀನ್ ಕೈದಿಗಳನ್ನು ರಕ್ಷಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಹಮಾಸ್ ಕರೆ ನೀಡಿದೆ.

ಪ್ಯಾಲೆಸ್ತೀನ್ ನ್ಯಾಷನಲ್ ಇನಿಶಿಯೇಟಿವ್‌ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ

ಪ್ಯಾಲೆಸ್ತೀನಿಯನ್ ನ್ಯಾಷನಲ್ ಇನಿಶಿಯೇಟಿವ್‌ನ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ ಅವರು ಈ ಶಾಸನದ ‘ಗಂಭೀರತೆ’ಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಪ್ಯಾಲೆಸ್ತೀನ್ ರಾಜಕೀಯ ಕೈದಿಗಳು ಮತ್ತು ಹೋರಾಟಗಾರರನ್ನು ಗುರಿಯಾಗಿಸುತ್ತದೆ ಎಂದು ಅವರು ಹೇಳಿದ್ದಾರೆ. ಇಸ್ರೇಲಿ ವ್ಯವಸ್ಥೆಯಲ್ಲಿ ಉಂಟಾಗಿರುವ ‘ಫ್ಯಾಸಿಸ್ಟ್ ಬದಲಾವಣೆಯ ಆಳವನ್ನು’ ಇಂತಹ ಅನ್ಯಾಯದ ಮತ್ತು ಅಮಾನವೀಯ ಕಾನೂನು ಪ್ರತಿಬಿಂಬಿಸುತ್ತದೆ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್

ಗಾಝಾ ಮೂಲದ ಮಾನವ ಹಕ್ಕುಗಳ ಸಂಸ್ಥೆ ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್ (ಪಿಸಿಹೆಚ್‌ಆರ್) ಹೊಸ ಕಾನೂನನ್ನು ‘ಕಠಿಣ ಪದಗಳಲ್ಲಿ’ ಖಂಡಿಸಿದೆ.

ಈ ಕಾನೂನು ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ ಮತ್ತು ಕಾನೂನಿನ ಮುಖವಾಡದ ಅಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ನಡೆಸುವ ಇಸ್ರೇಲ್‌ನ ಸುದೀರ್ಘ ನೀತಿಯನ್ನು ಗಟ್ಟಿಗೊಳಿಸುತ್ತದೆ. ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಹೆಚ್‌ಆರ್‌ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಯುಎನ್‌ ಹ್ಯೂಮನ್ ರೈಟ್ಸ್ ಆಫಿಸ್

ಪ್ಯಾಲೆಸ್ತೀನ್‌ನಲ್ಲಿರುವ ಯುಎನ್‌ ಮಾನವ ಹಕ್ಕುಗಳ ಕಚೇರಿ ತಾರತಮ್ಯದಿಂದ ಕೂಡಿದ ಈ ಮರಣದಂಡನೆ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಇಸ್ರೇಲ್ ಹೊಂದಿರುವ ಬದ್ಧತೆಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯು ಎಲ್ಲಾ ಸಂದರ್ಭಗಳಲ್ಲೂ ಮರಣದಂಡನೆಯನ್ನು ವಿರೋಧಿಸುತ್ತದೆ. ಈ ಹೊಸ ಕಾನೂನಿನ ಜಾರಿಯು ಕ್ರೂರ, ಅಮಾನವೀಯ ಅಥವಾ ಅವಮಾನಕರ ಶಿಕ್ಷೆಯನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಮುಂದುವರಿದು, ಈ ಕಾನೂನು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಮೇಲಿನ ಇಸ್ರೇಲ್‌ನ ಉಲ್ಲಂಘನೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಏಕೆಂದರೆ, ಇದು ಕೇವಲ ಆಕ್ರಮಿತ ಪಶ್ಚಿಮ ದಂಡೆ ಮತ್ತು ಇಸ್ರೇಲ್‌ನಲ್ಲಿರುವ ಪ್ಯಾಲೆಸ್ತೀನ್‌ನಿಯರಿಗೆ ಮಾತ್ರ ಅನ್ವಯಿಸುತ್ತದೆ, ಇವರಿಗೆ ಹೆಚ್ಚಾಗಿ ಅನ್ಯಾಯದ ವಿಚಾರಣೆಗಳ ನಂತರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅದು ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್

ಇಸ್ರೇಲ್ ಹೊಸ ಕಾನೂನನ್ನು ರದ್ದುಗೊಳಿಸಬೇಕು ಎಂದು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಒತ್ತಾಯಿಸಿದೆ. “ಇದು ‘ಕ್ರೌರ್ಯ, ತಾರತಮ್ಯ ಮತ್ತು ಮಾನವ ಹಕ್ಕುಗಳ ಬಗೆಗಿನ ಸಂಪೂರ್ಣ ತಿರಸ್ಕಾರದ ಸಾರ್ವಜನಿಕ ಪ್ರದರ್ಶನ” ಎಂದು ಬಣ್ಣಿಸಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಸಂಶೋಧನೆ, ವಕಾಲತ್ತು, ನೀತಿ ಮತ್ತು ಪ್ರಚಾರಗಳ ಹಿರಿಯ ನಿರ್ದೇಶಕಿ ಎರಿಕಾ ಗುವೆರಾ-ರೋಸಾಸ್ ಅವರು, ಪ್ಯಾಲೆಸ್ತೀನ್ ಕೈದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಸೈನಿಕರ ಮೇಲಿನ ಎಲ್ಲಾ ಆರೋಪಗಳನ್ನು ಇಸ್ರೇಲ್ ಕೈಬಿಟ್ಟ ಕೆಲವೇ ವಾರಗಳಲ್ಲಿ ಈ ಕಾನೂನು ಅಂಗೀಕಾರವಾಗಿದೆ ಎಂದಿದ್ದಾರೆ.

ವರ್ಷಗಳಿಂದ ಪ್ಯಾಲೆಸ್ತೀನಿಯರ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಕಾನೂನು ಬಾಹಿರkNf ಹತ್ಯೆ ಸೇರಿದಂತೆ ಇತರ ಆತಂಕಕಾರಿ ದಮನ ಕ್ರಮಗಳನ್ನು ನೋಡುತ್ತಿದ್ದೇವೆ. ಇವುಗಳನ್ನು ಎಸಗುವವರು ಯಾವುದೇ ಶಿಕ್ಷೆಯಿಲ್ಲದೆ ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವೇ ನಡೆಸುವ ಈ ಮರಣದಂಡನೆಗಳಿಗೆ ಅವಕಾಶ ನೀಡುವ ಹೊಸ ಕಾನೂನು ಅಂತಹ ನೀತಿಗಳ ಪರಮಾವಧಿಯಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಯುರೋಪ್

ಯುರೋಪ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಅಲೈನ್ ಬರ್ಸೆಟ್ ಅವರು, ಇಸ್ರೇಲ್‌ನ ಹೊಸ ಕಾನೂನಿನ ಅಂಗೀಕಾರವನ್ನು ‘ಗಂಭೀರ ಹಿನ್ನಡೆ’ ಎಂದು ಖಂಡಿಸಿದ್ದಾರೆ.

“ಮರಣದಂಡನೆಯು ಸಮಕಾಲೀನ ಮಾನವ ಹಕ್ಕುಗಳ ಮಾನದಂಡಗಳಿಗೆ ಹೊಂದಿಕೆಯಾಗದ ಒಂದು ಹಳೆಯ ಕಾಲದ ಕಾನೂನು ಪದ್ಧತಿಯಾಗಿದೆ. ಅಷ್ಟೇ ಅಲ್ಲದೆ, ತಾರತಮ್ಯದಿಂದ ಕೂಡಿದ ಯಾವುದೇ ರೀತಿಯ ಮರಣದಂಡನೆಯ ಅನ್ವಯವು ಕಾನೂನಿನ ಆಡಳಿತವಿರುವ ದೇಶದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಬರ್ಸೆಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ದೇಶವು ಯುರೋಪ್ ಕೌನ್ಸಿಲ್‌ನ ಹಲವಾರು ಒಪ್ಪಂದಗಳಿಗೆ ಬದ್ಧವಾಗಿದೆ ಮತ್ತು ಅದರ ವಿವಿಧ ಸಹಕಾರ ಕಾರ್ಯವಿಧಾನಗಳಲ್ಲಿ ಭಾಗವಹಿಸುತ್ತದೆ ಎಂಬ ಅಂಶವನ್ನೂ ಅವರು ನೆನಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಈ ಕಾನೂನಿಗೆ ಸಂಬಂಧಿಸಿದ ಮುಂಬರುವ ಬೆಳವಣಿಗೆಗಳನ್ನು ಯುರೋಪ್ ಕೌನ್ಸಿಲ್ ಸೂಕ್ಷ್ಮವಾಗಿ ಗಮನಿಸಲಿದೆ. ಇಸ್ರೇಲ್ ಸಹಿ ಮಾಡಿರುವ ಯುರೋಪ್ ಕೌನ್ಸಿಲ್ ಒಪ್ಪಂದಗಳ ಮೇಲೆ ಮತ್ತು ಅದು ಭಾಗವಹಿಸುವ ಸಹಕಾರ ಕಾರ್ಯವಿಧಾನಗಳ ಮೇಲೆ ಈ ಕಾನೂನು ಬೀರುವ ಪರಿಣಾಮಗಳನ್ನು ಕೌನ್ಸಿಲ್ ಪರಿಶೀಲಿಸಲಿದೆ ಎಂದು ಬರ್ಸೆಟ್ ಹೇಳಿದ್ದಾರೆ.

ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ

ಐರಿಶ್ ವಿದೇಶಾಂಗ ವ್ಯವಹಾರ ಮತ್ತು ವ್ಯಾಪಾರ ಇಲಾಖೆಯು ಹೊರಡಿಸಿದ ಹೇಳಿಕೆಯಲ್ಲಿ ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ ಇಸ್ರೇಲ್‌ನ ಹೊಸ ಕಾನೂನನ್ನು ಖಂಡಿಸಿದ್ದಾರೆ. “ಈ ಹೊಸ ಕಾನೂನು ಪ್ಯಾಲೆಸ್ತೀನಿಯರಿಗೆ ಸಂಬಂಧಿಸಿದಂತೆ ವಾಸ್ತವಿಕವಾಗಿ ತಾರತಮ್ಯದ ಸ್ವರೂಪವನ್ನು ಹೊಂದಿರುವುದು ನನಗೆ ವಿಶೇಷವಾಗಿ ಕಳವಳ ಉಂಟುಮಾಡಿದೆ” ಎಂದು ಅವರು ಹೇಳಿದ್ದಾರೆ.

“ಬದುಕುವ ಹಕ್ಕು ಮೂಲಭೂತ ಮಾನವ ಹಕ್ಕು. ಐರ್ಲೆಂಡ್ ಎಲ್ಲಾ ಸಂದರ್ಭಗಳಲ್ಲಿ ಮತ್ತು ಎಲ್ಲಾ ಪರಿಸ್ಥಿತಿಗಳಲ್ಲಿ ಮರಣದಂಡನೆಯ ಬಳಕೆಯನ್ನು ಸತತವಾಗಿ ಮತ್ತು ಬಲವಾಗಿ ವಿರೋಧಿಸುತ್ತದೆ” ಎಂದು ಹೇಳಿರುವ ಅವರು, ಈ ಕಾನೂನನ್ನು ಜಾರಿಗೆ ತರದಂತೆ ಇಸ್ರೇಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಟಲಿ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ

ಇಟಲಿಯ ವಿದೇಶಾಂಗ ಸಚಿವ ತಾಜಾನಿ ಅವರು ಈ ಕಾನೂನು ಅಧಿಕೃತವಾಗಿ ಅಂಗೀಕಾರವಾಗುವ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಹೊಸ ಮಸೂದೆಯನ್ನು ಹಿಂಪಡೆಯುವಂತೆ ಇಟಲಿ, ಜರ್ಮನಿ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್ ದೇಶಗಳು ಇಸ್ರೇಲ್ ಸರ್ಕಾರಕ್ಕೆ ವಿನಂತಿಸಿವೆ ಎಂದು ತಾಜಾನಿ ತಿಳಿಸಿದ್ದಾರೆ.

ವಿಶೇಷವಾಗಿ ವಿಶ್ವಸಂಸ್ಥೆಯಲ್ಲಿ ಮತದಾನದ ಮೂಲಕ ಅಂಗೀಕರಿಸಲಾದ ನಿರ್ಣಯಗಳ ಪ್ರಕಾರ, ಮರಣದಂಡನೆಯ ಮೇಲಿನ ತಡೆಯಾಜ್ಞೆಗೆ ಬದ್ಧರಾಗಿರಬೇಕು. ಈ ಬದ್ಧತೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ತಾಜಾನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.

“ನಮ್ಮ ಪಾಲಿಗೆ, ಜೀವನವು ಒಂದು ಸಂಪೂರ್ಣ ಮೌಲ್ಯವಾಗಿದೆ; ಶಿಕ್ಷೆಯನ್ನು ವಿಧಿಸುವ ಸಲುವಾಗಿ ಅದನ್ನು ಕಸಿದುಕೊಳ್ಳುವ ಹಕ್ಕನ್ನು ತನ್ನದಾಗಿಸಿಕೊಳ್ಳುವುದು ಮಾನವೀಯವಲ್ಲದ ಕ್ರಮವಾಗಿದೆ ಮತ್ತು ಇದು ವ್ಯಕ್ತಿಯ ಘನತೆಯನ್ನು ಉಲ್ಲಂಘಿಸುತ್ತದೆ” ಎಂದು ಅವರು ಹೇಳಿದ್ದಾರೆ.









 











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...