Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಮತ್ತು ತಾರತಮ್ಯದಿಂದ ಕೂಡಿದೆ ಎಂದಿದೆ.

ಪ್ಯಾಲೆಸ್ತೀನ್ ಅಥಾರಿಟಿ

ಪ್ಯಾಲೆಸ್ತೀನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊಸ ಕಾನೂನನ್ನು ‘ಅಪಾಯಕಾರಿ ಬೆಳವಣಿಗೆ’ ಎಂದು ಬಣ್ಣಿಸಿದೆ. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಸಚಿವಾಲಯವು, “ಆಕ್ರಮಿತ ಪ್ಯಾಲೆಸ್ತೀನ್’ ಭೂಪ್ರದೇಶದ ಮೇಲೆ ಇಸ್ರೇಲ್‌ಗೆ ಯಾವುದೇ ಸಾರ್ವಭೌಮತ್ವವಿಲ್ಲ” ಎಂದು ಒತ್ತಿ ಹೇಳಿದೆ.

“ಹೊಸ ಕಾನೂನು ಮತ್ತೊಮ್ಮೆ ಇಸ್ರೇಲಿ ವಸಾಹತುಶಾಹಿ ವ್ಯವಸ್ಥೆಯ ಮುಖವನ್ನು ಬಯಲು ಮಾಡಿದೆ. ಇದು ಶಾಸಕಾಂಗದ ರಕ್ಷಣೆಯಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ಕಾನೂನುಬದ್ಧಗೊಳಿಸಲು ಪ್ರಯತ್ನಿಸುತ್ತಿದೆ” ಎಂದಿದೆ.

ಹಮಾಸ್

ಮರಣದಂಡನೆ ಕಾನೂನಿನ ಅಂಗೀಕಾರವು ಇಸ್ರೇಲ್ ಜೈಲುಗಳಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಯರ ‘ಜೀವಕ್ಕೆ ಬೆದರಿಕೆ ಒಡ್ಡುವ ಅಪಾಯಕಾರಿ ಮುನ್ಸೂಚನೆ’ ಎಂದು ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಗುಂಪು ಹಮಾಸ್ ಟೀಕಿಸಿದೆ.

“ಇಸ್ರೇಲ್ ಸರ್ಕಾರಕ್ಕೆ ಅಂತಾರಾಷ್ಟ್ರೀಯ ಕಾನೂನುಗಳ ಮೇಲೆ ಗೌರವವಿಲ್ಲ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಕಾಳಜಿಯಿಲ್ಲ ಎಂಬುವುದು ಈ ನಿರ್ಧಾರದಿಂದ ಮತ್ತೊಮ್ಮೆ ಸಾಬೀತಾಗಿದೆ” ಎಂದು ಹಮಾಸ್ ಹೇಳಿದೆ.

ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯವು, ಇಸ್ರೇಲ್‌ನ ಕ್ರೌರ್ಯದಿಂದ ಪ್ಯಾಲೆಸ್ತೀನ್ ಕೈದಿಗಳನ್ನು ರಕ್ಷಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಹಮಾಸ್ ಕರೆ ನೀಡಿದೆ.

ಪ್ಯಾಲೆಸ್ತೀನ್ ನ್ಯಾಷನಲ್ ಇನಿಶಿಯೇಟಿವ್‌ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ

ಪ್ಯಾಲೆಸ್ತೀನಿಯನ್ ನ್ಯಾಷನಲ್ ಇನಿಶಿಯೇಟಿವ್‌ನ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ ಅವರು ಈ ಶಾಸನದ ‘ಗಂಭೀರತೆ’ಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಪ್ಯಾಲೆಸ್ತೀನ್ ರಾಜಕೀಯ ಕೈದಿಗಳು ಮತ್ತು ಹೋರಾಟಗಾರರನ್ನು ಗುರಿಯಾಗಿಸುತ್ತದೆ ಎಂದು ಅವರು ಹೇಳಿದ್ದಾರೆ. ಇಸ್ರೇಲಿ ವ್ಯವಸ್ಥೆಯಲ್ಲಿ ಉಂಟಾಗಿರುವ ‘ಫ್ಯಾಸಿಸ್ಟ್ ಬದಲಾವಣೆಯ ಆಳವನ್ನು’ ಇಂತಹ ಅನ್ಯಾಯದ ಮತ್ತು ಅಮಾನವೀಯ ಕಾನೂನು ಪ್ರತಿಬಿಂಬಿಸುತ್ತದೆ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್

ಗಾಝಾ ಮೂಲದ ಮಾನವ ಹಕ್ಕುಗಳ ಸಂಸ್ಥೆ ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್ (ಪಿಸಿಹೆಚ್‌ಆರ್) ಹೊಸ ಕಾನೂನನ್ನು ‘ಕಠಿಣ ಪದಗಳಲ್ಲಿ’ ಖಂಡಿಸಿದೆ.

ಈ ಕಾನೂನು ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ ಮತ್ತು ಕಾನೂನಿನ ಮುಖವಾಡದ ಅಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ನಡೆಸುವ ಇಸ್ರೇಲ್‌ನ ಸುದೀರ್ಘ ನೀತಿಯನ್ನು ಗಟ್ಟಿಗೊಳಿಸುತ್ತದೆ. ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಹೆಚ್‌ಆರ್‌ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಯುಎನ್‌ ಹ್ಯೂಮನ್ ರೈಟ್ಸ್ ಆಫಿಸ್

ಪ್ಯಾಲೆಸ್ತೀನ್‌ನಲ್ಲಿರುವ ಯುಎನ್‌ ಮಾನವ ಹಕ್ಕುಗಳ ಕಚೇರಿ ತಾರತಮ್ಯದಿಂದ ಕೂಡಿದ ಈ ಮರಣದಂಡನೆ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಇಸ್ರೇಲ್ ಹೊಂದಿರುವ ಬದ್ಧತೆಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯು ಎಲ್ಲಾ ಸಂದರ್ಭಗಳಲ್ಲೂ ಮರಣದಂಡನೆಯನ್ನು ವಿರೋಧಿಸುತ್ತದೆ. ಈ ಹೊಸ ಕಾನೂನಿನ ಜಾರಿಯು ಕ್ರೂರ, ಅಮಾನವೀಯ ಅಥವಾ ಅವಮಾನಕರ ಶಿಕ್ಷೆಯನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಮುಂದುವರಿದು, ಈ ಕಾನೂನು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಮೇಲಿನ ಇಸ್ರೇಲ್‌ನ ಉಲ್ಲಂಘನೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಏಕೆಂದರೆ, ಇದು ಕೇವಲ ಆಕ್ರಮಿತ ಪಶ್ಚಿಮ ದಂಡೆ ಮತ್ತು ಇಸ್ರೇಲ್‌ನಲ್ಲಿರುವ ಪ್ಯಾಲೆಸ್ತೀನ್‌ನಿಯರಿಗೆ ಮಾತ್ರ ಅನ್ವಯಿಸುತ್ತದೆ, ಇವರಿಗೆ ಹೆಚ್ಚಾಗಿ ಅನ್ಯಾಯದ ವಿಚಾರಣೆಗಳ ನಂತರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅದು ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್

ಇಸ್ರೇಲ್ ಹೊಸ ಕಾನೂನನ್ನು ರದ್ದುಗೊಳಿಸಬೇಕು ಎಂದು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಒತ್ತಾಯಿಸಿದೆ. “ಇದು ‘ಕ್ರೌರ್ಯ, ತಾರತಮ್ಯ ಮತ್ತು ಮಾನವ ಹಕ್ಕುಗಳ ಬಗೆಗಿನ ಸಂಪೂರ್ಣ ತಿರಸ್ಕಾರದ ಸಾರ್ವಜನಿಕ ಪ್ರದರ್ಶನ” ಎಂದು ಬಣ್ಣಿಸಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಸಂಶೋಧನೆ, ವಕಾಲತ್ತು, ನೀತಿ ಮತ್ತು ಪ್ರಚಾರಗಳ ಹಿರಿಯ ನಿರ್ದೇಶಕಿ ಎರಿಕಾ ಗುವೆರಾ-ರೋಸಾಸ್ ಅವರು, ಪ್ಯಾಲೆಸ್ತೀನ್ ಕೈದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಸೈನಿಕರ ಮೇಲಿನ ಎಲ್ಲಾ ಆರೋಪಗಳನ್ನು ಇಸ್ರೇಲ್ ಕೈಬಿಟ್ಟ ಕೆಲವೇ ವಾರಗಳಲ್ಲಿ ಈ ಕಾನೂನು ಅಂಗೀಕಾರವಾಗಿದೆ ಎಂದಿದ್ದಾರೆ.

ವರ್ಷಗಳಿಂದ ಪ್ಯಾಲೆಸ್ತೀನಿಯರ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಕಾನೂನು ಬಾಹಿರkNf ಹತ್ಯೆ ಸೇರಿದಂತೆ ಇತರ ಆತಂಕಕಾರಿ ದಮನ ಕ್ರಮಗಳನ್ನು ನೋಡುತ್ತಿದ್ದೇವೆ. ಇವುಗಳನ್ನು ಎಸಗುವವರು ಯಾವುದೇ ಶಿಕ್ಷೆಯಿಲ್ಲದೆ ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವೇ ನಡೆಸುವ ಈ ಮರಣದಂಡನೆಗಳಿಗೆ ಅವಕಾಶ ನೀಡುವ ಹೊಸ ಕಾನೂನು ಅಂತಹ ನೀತಿಗಳ ಪರಮಾವಧಿಯಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಯುರೋಪ್

ಯುರೋಪ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಅಲೈನ್ ಬರ್ಸೆಟ್ ಅವರು, ಇಸ್ರೇಲ್‌ನ ಹೊಸ ಕಾನೂನಿನ ಅಂಗೀಕಾರವನ್ನು ‘ಗಂಭೀರ ಹಿನ್ನಡೆ’ ಎಂದು ಖಂಡಿಸಿದ್ದಾರೆ.

“ಮರಣದಂಡನೆಯು ಸಮಕಾಲೀನ ಮಾನವ ಹಕ್ಕುಗಳ ಮಾನದಂಡಗಳಿಗೆ ಹೊಂದಿಕೆಯಾಗದ ಒಂದು ಹಳೆಯ ಕಾಲದ ಕಾನೂನು ಪದ್ಧತಿಯಾಗಿದೆ. ಅಷ್ಟೇ ಅಲ್ಲದೆ, ತಾರತಮ್ಯದಿಂದ ಕೂಡಿದ ಯಾವುದೇ ರೀತಿಯ ಮರಣದಂಡನೆಯ ಅನ್ವಯವು ಕಾನೂನಿನ ಆಡಳಿತವಿರುವ ದೇಶದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಬರ್ಸೆಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ದೇಶವು ಯುರೋಪ್ ಕೌನ್ಸಿಲ್‌ನ ಹಲವಾರು ಒಪ್ಪಂದಗಳಿಗೆ ಬದ್ಧವಾಗಿದೆ ಮತ್ತು ಅದರ ವಿವಿಧ ಸಹಕಾರ ಕಾರ್ಯವಿಧಾನಗಳಲ್ಲಿ ಭಾಗವಹಿಸುತ್ತದೆ ಎಂಬ ಅಂಶವನ್ನೂ ಅವರು ನೆನಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಈ ಕಾನೂನಿಗೆ ಸಂಬಂಧಿಸಿದ ಮುಂಬರುವ ಬೆಳವಣಿಗೆಗಳನ್ನು ಯುರೋಪ್ ಕೌನ್ಸಿಲ್ ಸೂಕ್ಷ್ಮವಾಗಿ ಗಮನಿಸಲಿದೆ. ಇಸ್ರೇಲ್ ಸಹಿ ಮಾಡಿರುವ ಯುರೋಪ್ ಕೌನ್ಸಿಲ್ ಒಪ್ಪಂದಗಳ ಮೇಲೆ ಮತ್ತು ಅದು ಭಾಗವಹಿಸುವ ಸಹಕಾರ ಕಾರ್ಯವಿಧಾನಗಳ ಮೇಲೆ ಈ ಕಾನೂನು ಬೀರುವ ಪರಿಣಾಮಗಳನ್ನು ಕೌನ್ಸಿಲ್ ಪರಿಶೀಲಿಸಲಿದೆ ಎಂದು ಬರ್ಸೆಟ್ ಹೇಳಿದ್ದಾರೆ.

ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ

ಐರಿಶ್ ವಿದೇಶಾಂಗ ವ್ಯವಹಾರ ಮತ್ತು ವ್ಯಾಪಾರ ಇಲಾಖೆಯು ಹೊರಡಿಸಿದ ಹೇಳಿಕೆಯಲ್ಲಿ ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ ಇಸ್ರೇಲ್‌ನ ಹೊಸ ಕಾನೂನನ್ನು ಖಂಡಿಸಿದ್ದಾರೆ. “ಈ ಹೊಸ ಕಾನೂನು ಪ್ಯಾಲೆಸ್ತೀನಿಯರಿಗೆ ಸಂಬಂಧಿಸಿದಂತೆ ವಾಸ್ತವಿಕವಾಗಿ ತಾರತಮ್ಯದ ಸ್ವರೂಪವನ್ನು ಹೊಂದಿರುವುದು ನನಗೆ ವಿಶೇಷವಾಗಿ ಕಳವಳ ಉಂಟುಮಾಡಿದೆ” ಎಂದು ಅವರು ಹೇಳಿದ್ದಾರೆ.

“ಬದುಕುವ ಹಕ್ಕು ಮೂಲಭೂತ ಮಾನವ ಹಕ್ಕು. ಐರ್ಲೆಂಡ್ ಎಲ್ಲಾ ಸಂದರ್ಭಗಳಲ್ಲಿ ಮತ್ತು ಎಲ್ಲಾ ಪರಿಸ್ಥಿತಿಗಳಲ್ಲಿ ಮರಣದಂಡನೆಯ ಬಳಕೆಯನ್ನು ಸತತವಾಗಿ ಮತ್ತು ಬಲವಾಗಿ ವಿರೋಧಿಸುತ್ತದೆ” ಎಂದು ಹೇಳಿರುವ ಅವರು, ಈ ಕಾನೂನನ್ನು ಜಾರಿಗೆ ತರದಂತೆ ಇಸ್ರೇಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಟಲಿ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ

ಇಟಲಿಯ ವಿದೇಶಾಂಗ ಸಚಿವ ತಾಜಾನಿ ಅವರು ಈ ಕಾನೂನು ಅಧಿಕೃತವಾಗಿ ಅಂಗೀಕಾರವಾಗುವ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಹೊಸ ಮಸೂದೆಯನ್ನು ಹಿಂಪಡೆಯುವಂತೆ ಇಟಲಿ, ಜರ್ಮನಿ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್ ದೇಶಗಳು ಇಸ್ರೇಲ್ ಸರ್ಕಾರಕ್ಕೆ ವಿನಂತಿಸಿವೆ ಎಂದು ತಾಜಾನಿ ತಿಳಿಸಿದ್ದಾರೆ.

ವಿಶೇಷವಾಗಿ ವಿಶ್ವಸಂಸ್ಥೆಯಲ್ಲಿ ಮತದಾನದ ಮೂಲಕ ಅಂಗೀಕರಿಸಲಾದ ನಿರ್ಣಯಗಳ ಪ್ರಕಾರ, ಮರಣದಂಡನೆಯ ಮೇಲಿನ ತಡೆಯಾಜ್ಞೆಗೆ ಬದ್ಧರಾಗಿರಬೇಕು. ಈ ಬದ್ಧತೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ತಾಜಾನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.

“ನಮ್ಮ ಪಾಲಿಗೆ, ಜೀವನವು ಒಂದು ಸಂಪೂರ್ಣ ಮೌಲ್ಯವಾಗಿದೆ; ಶಿಕ್ಷೆಯನ್ನು ವಿಧಿಸುವ ಸಲುವಾಗಿ ಅದನ್ನು ಕಸಿದುಕೊಳ್ಳುವ ಹಕ್ಕನ್ನು ತನ್ನದಾಗಿಸಿಕೊಳ್ಳುವುದು ಮಾನವೀಯವಲ್ಲದ ಕ್ರಮವಾಗಿದೆ ಮತ್ತು ಇದು ವ್ಯಕ್ತಿಯ ಘನತೆಯನ್ನು ಉಲ್ಲಂಘಿಸುತ್ತದೆ” ಎಂದು ಅವರು ಹೇಳಿದ್ದಾರೆ.









 











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...