Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಮತ್ತು ತಾರತಮ್ಯದಿಂದ ಕೂಡಿದೆ ಎಂದಿದೆ.

ಪ್ಯಾಲೆಸ್ತೀನ್ ಅಥಾರಿಟಿ

ಪ್ಯಾಲೆಸ್ತೀನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊಸ ಕಾನೂನನ್ನು ‘ಅಪಾಯಕಾರಿ ಬೆಳವಣಿಗೆ’ ಎಂದು ಬಣ್ಣಿಸಿದೆ. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಸಚಿವಾಲಯವು, “ಆಕ್ರಮಿತ ಪ್ಯಾಲೆಸ್ತೀನ್’ ಭೂಪ್ರದೇಶದ ಮೇಲೆ ಇಸ್ರೇಲ್‌ಗೆ ಯಾವುದೇ ಸಾರ್ವಭೌಮತ್ವವಿಲ್ಲ” ಎಂದು ಒತ್ತಿ ಹೇಳಿದೆ.

“ಹೊಸ ಕಾನೂನು ಮತ್ತೊಮ್ಮೆ ಇಸ್ರೇಲಿ ವಸಾಹತುಶಾಹಿ ವ್ಯವಸ್ಥೆಯ ಮುಖವನ್ನು ಬಯಲು ಮಾಡಿದೆ. ಇದು ಶಾಸಕಾಂಗದ ರಕ್ಷಣೆಯಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ಕಾನೂನುಬದ್ಧಗೊಳಿಸಲು ಪ್ರಯತ್ನಿಸುತ್ತಿದೆ” ಎಂದಿದೆ.

ಹಮಾಸ್

ಮರಣದಂಡನೆ ಕಾನೂನಿನ ಅಂಗೀಕಾರವು ಇಸ್ರೇಲ್ ಜೈಲುಗಳಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಯರ ‘ಜೀವಕ್ಕೆ ಬೆದರಿಕೆ ಒಡ್ಡುವ ಅಪಾಯಕಾರಿ ಮುನ್ಸೂಚನೆ’ ಎಂದು ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಗುಂಪು ಹಮಾಸ್ ಟೀಕಿಸಿದೆ.

“ಇಸ್ರೇಲ್ ಸರ್ಕಾರಕ್ಕೆ ಅಂತಾರಾಷ್ಟ್ರೀಯ ಕಾನೂನುಗಳ ಮೇಲೆ ಗೌರವವಿಲ್ಲ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಕಾಳಜಿಯಿಲ್ಲ ಎಂಬುವುದು ಈ ನಿರ್ಧಾರದಿಂದ ಮತ್ತೊಮ್ಮೆ ಸಾಬೀತಾಗಿದೆ” ಎಂದು ಹಮಾಸ್ ಹೇಳಿದೆ.

ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯವು, ಇಸ್ರೇಲ್‌ನ ಕ್ರೌರ್ಯದಿಂದ ಪ್ಯಾಲೆಸ್ತೀನ್ ಕೈದಿಗಳನ್ನು ರಕ್ಷಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಹಮಾಸ್ ಕರೆ ನೀಡಿದೆ.

ಪ್ಯಾಲೆಸ್ತೀನ್ ನ್ಯಾಷನಲ್ ಇನಿಶಿಯೇಟಿವ್‌ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ

ಪ್ಯಾಲೆಸ್ತೀನಿಯನ್ ನ್ಯಾಷನಲ್ ಇನಿಶಿಯೇಟಿವ್‌ನ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬರ್ಘೂತಿ ಅವರು ಈ ಶಾಸನದ ‘ಗಂಭೀರತೆ’ಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಪ್ಯಾಲೆಸ್ತೀನ್ ರಾಜಕೀಯ ಕೈದಿಗಳು ಮತ್ತು ಹೋರಾಟಗಾರರನ್ನು ಗುರಿಯಾಗಿಸುತ್ತದೆ ಎಂದು ಅವರು ಹೇಳಿದ್ದಾರೆ. ಇಸ್ರೇಲಿ ವ್ಯವಸ್ಥೆಯಲ್ಲಿ ಉಂಟಾಗಿರುವ ‘ಫ್ಯಾಸಿಸ್ಟ್ ಬದಲಾವಣೆಯ ಆಳವನ್ನು’ ಇಂತಹ ಅನ್ಯಾಯದ ಮತ್ತು ಅಮಾನವೀಯ ಕಾನೂನು ಪ್ರತಿಬಿಂಬಿಸುತ್ತದೆ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್

ಗಾಝಾ ಮೂಲದ ಮಾನವ ಹಕ್ಕುಗಳ ಸಂಸ್ಥೆ ಪ್ಯಾಲೆಸ್ತೀನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್ (ಪಿಸಿಹೆಚ್‌ಆರ್) ಹೊಸ ಕಾನೂನನ್ನು ‘ಕಠಿಣ ಪದಗಳಲ್ಲಿ’ ಖಂಡಿಸಿದೆ.

ಈ ಕಾನೂನು ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ ಮತ್ತು ಕಾನೂನಿನ ಮುಖವಾಡದ ಅಡಿಯಲ್ಲಿ ಕಾನೂನು ಬಾಹಿರ ಹತ್ಯೆಗಳನ್ನು ನಡೆಸುವ ಇಸ್ರೇಲ್‌ನ ಸುದೀರ್ಘ ನೀತಿಯನ್ನು ಗಟ್ಟಿಗೊಳಿಸುತ್ತದೆ. ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಹೆಚ್‌ಆರ್‌ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಯುಎನ್‌ ಹ್ಯೂಮನ್ ರೈಟ್ಸ್ ಆಫಿಸ್

ಪ್ಯಾಲೆಸ್ತೀನ್‌ನಲ್ಲಿರುವ ಯುಎನ್‌ ಮಾನವ ಹಕ್ಕುಗಳ ಕಚೇರಿ ತಾರತಮ್ಯದಿಂದ ಕೂಡಿದ ಈ ಮರಣದಂಡನೆ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಇಸ್ರೇಲ್ ಹೊಂದಿರುವ ಬದ್ಧತೆಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯು ಎಲ್ಲಾ ಸಂದರ್ಭಗಳಲ್ಲೂ ಮರಣದಂಡನೆಯನ್ನು ವಿರೋಧಿಸುತ್ತದೆ. ಈ ಹೊಸ ಕಾನೂನಿನ ಜಾರಿಯು ಕ್ರೂರ, ಅಮಾನವೀಯ ಅಥವಾ ಅವಮಾನಕರ ಶಿಕ್ಷೆಯನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಮುಂದುವರಿದು, ಈ ಕಾನೂನು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಮೇಲಿನ ಇಸ್ರೇಲ್‌ನ ಉಲ್ಲಂಘನೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಏಕೆಂದರೆ, ಇದು ಕೇವಲ ಆಕ್ರಮಿತ ಪಶ್ಚಿಮ ದಂಡೆ ಮತ್ತು ಇಸ್ರೇಲ್‌ನಲ್ಲಿರುವ ಪ್ಯಾಲೆಸ್ತೀನ್‌ನಿಯರಿಗೆ ಮಾತ್ರ ಅನ್ವಯಿಸುತ್ತದೆ, ಇವರಿಗೆ ಹೆಚ್ಚಾಗಿ ಅನ್ಯಾಯದ ವಿಚಾರಣೆಗಳ ನಂತರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅದು ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್

ಇಸ್ರೇಲ್ ಹೊಸ ಕಾನೂನನ್ನು ರದ್ದುಗೊಳಿಸಬೇಕು ಎಂದು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಒತ್ತಾಯಿಸಿದೆ. “ಇದು ‘ಕ್ರೌರ್ಯ, ತಾರತಮ್ಯ ಮತ್ತು ಮಾನವ ಹಕ್ಕುಗಳ ಬಗೆಗಿನ ಸಂಪೂರ್ಣ ತಿರಸ್ಕಾರದ ಸಾರ್ವಜನಿಕ ಪ್ರದರ್ಶನ” ಎಂದು ಬಣ್ಣಿಸಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಸಂಶೋಧನೆ, ವಕಾಲತ್ತು, ನೀತಿ ಮತ್ತು ಪ್ರಚಾರಗಳ ಹಿರಿಯ ನಿರ್ದೇಶಕಿ ಎರಿಕಾ ಗುವೆರಾ-ರೋಸಾಸ್ ಅವರು, ಪ್ಯಾಲೆಸ್ತೀನ್ ಕೈದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಸೈನಿಕರ ಮೇಲಿನ ಎಲ್ಲಾ ಆರೋಪಗಳನ್ನು ಇಸ್ರೇಲ್ ಕೈಬಿಟ್ಟ ಕೆಲವೇ ವಾರಗಳಲ್ಲಿ ಈ ಕಾನೂನು ಅಂಗೀಕಾರವಾಗಿದೆ ಎಂದಿದ್ದಾರೆ.

ವರ್ಷಗಳಿಂದ ಪ್ಯಾಲೆಸ್ತೀನಿಯರ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಕಾನೂನು ಬಾಹಿರkNf ಹತ್ಯೆ ಸೇರಿದಂತೆ ಇತರ ಆತಂಕಕಾರಿ ದಮನ ಕ್ರಮಗಳನ್ನು ನೋಡುತ್ತಿದ್ದೇವೆ. ಇವುಗಳನ್ನು ಎಸಗುವವರು ಯಾವುದೇ ಶಿಕ್ಷೆಯಿಲ್ಲದೆ ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವೇ ನಡೆಸುವ ಈ ಮರಣದಂಡನೆಗಳಿಗೆ ಅವಕಾಶ ನೀಡುವ ಹೊಸ ಕಾನೂನು ಅಂತಹ ನೀತಿಗಳ ಪರಮಾವಧಿಯಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಯುರೋಪ್

ಯುರೋಪ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಅಲೈನ್ ಬರ್ಸೆಟ್ ಅವರು, ಇಸ್ರೇಲ್‌ನ ಹೊಸ ಕಾನೂನಿನ ಅಂಗೀಕಾರವನ್ನು ‘ಗಂಭೀರ ಹಿನ್ನಡೆ’ ಎಂದು ಖಂಡಿಸಿದ್ದಾರೆ.

“ಮರಣದಂಡನೆಯು ಸಮಕಾಲೀನ ಮಾನವ ಹಕ್ಕುಗಳ ಮಾನದಂಡಗಳಿಗೆ ಹೊಂದಿಕೆಯಾಗದ ಒಂದು ಹಳೆಯ ಕಾಲದ ಕಾನೂನು ಪದ್ಧತಿಯಾಗಿದೆ. ಅಷ್ಟೇ ಅಲ್ಲದೆ, ತಾರತಮ್ಯದಿಂದ ಕೂಡಿದ ಯಾವುದೇ ರೀತಿಯ ಮರಣದಂಡನೆಯ ಅನ್ವಯವು ಕಾನೂನಿನ ಆಡಳಿತವಿರುವ ದೇಶದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಬರ್ಸೆಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ದೇಶವು ಯುರೋಪ್ ಕೌನ್ಸಿಲ್‌ನ ಹಲವಾರು ಒಪ್ಪಂದಗಳಿಗೆ ಬದ್ಧವಾಗಿದೆ ಮತ್ತು ಅದರ ವಿವಿಧ ಸಹಕಾರ ಕಾರ್ಯವಿಧಾನಗಳಲ್ಲಿ ಭಾಗವಹಿಸುತ್ತದೆ ಎಂಬ ಅಂಶವನ್ನೂ ಅವರು ನೆನಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಈ ಕಾನೂನಿಗೆ ಸಂಬಂಧಿಸಿದ ಮುಂಬರುವ ಬೆಳವಣಿಗೆಗಳನ್ನು ಯುರೋಪ್ ಕೌನ್ಸಿಲ್ ಸೂಕ್ಷ್ಮವಾಗಿ ಗಮನಿಸಲಿದೆ. ಇಸ್ರೇಲ್ ಸಹಿ ಮಾಡಿರುವ ಯುರೋಪ್ ಕೌನ್ಸಿಲ್ ಒಪ್ಪಂದಗಳ ಮೇಲೆ ಮತ್ತು ಅದು ಭಾಗವಹಿಸುವ ಸಹಕಾರ ಕಾರ್ಯವಿಧಾನಗಳ ಮೇಲೆ ಈ ಕಾನೂನು ಬೀರುವ ಪರಿಣಾಮಗಳನ್ನು ಕೌನ್ಸಿಲ್ ಪರಿಶೀಲಿಸಲಿದೆ ಎಂದು ಬರ್ಸೆಟ್ ಹೇಳಿದ್ದಾರೆ.

ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ

ಐರಿಶ್ ವಿದೇಶಾಂಗ ವ್ಯವಹಾರ ಮತ್ತು ವ್ಯಾಪಾರ ಇಲಾಖೆಯು ಹೊರಡಿಸಿದ ಹೇಳಿಕೆಯಲ್ಲಿ ಐರ್ಲೆಂಡ್ ವಿದೇಶಾಂಗ ಸಚಿವೆ ಹೆಲೆನ್ ಮೆಕ್‌ಎಂಟೀ ಇಸ್ರೇಲ್‌ನ ಹೊಸ ಕಾನೂನನ್ನು ಖಂಡಿಸಿದ್ದಾರೆ. “ಈ ಹೊಸ ಕಾನೂನು ಪ್ಯಾಲೆಸ್ತೀನಿಯರಿಗೆ ಸಂಬಂಧಿಸಿದಂತೆ ವಾಸ್ತವಿಕವಾಗಿ ತಾರತಮ್ಯದ ಸ್ವರೂಪವನ್ನು ಹೊಂದಿರುವುದು ನನಗೆ ವಿಶೇಷವಾಗಿ ಕಳವಳ ಉಂಟುಮಾಡಿದೆ” ಎಂದು ಅವರು ಹೇಳಿದ್ದಾರೆ.

“ಬದುಕುವ ಹಕ್ಕು ಮೂಲಭೂತ ಮಾನವ ಹಕ್ಕು. ಐರ್ಲೆಂಡ್ ಎಲ್ಲಾ ಸಂದರ್ಭಗಳಲ್ಲಿ ಮತ್ತು ಎಲ್ಲಾ ಪರಿಸ್ಥಿತಿಗಳಲ್ಲಿ ಮರಣದಂಡನೆಯ ಬಳಕೆಯನ್ನು ಸತತವಾಗಿ ಮತ್ತು ಬಲವಾಗಿ ವಿರೋಧಿಸುತ್ತದೆ” ಎಂದು ಹೇಳಿರುವ ಅವರು, ಈ ಕಾನೂನನ್ನು ಜಾರಿಗೆ ತರದಂತೆ ಇಸ್ರೇಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಟಲಿ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ

ಇಟಲಿಯ ವಿದೇಶಾಂಗ ಸಚಿವ ತಾಜಾನಿ ಅವರು ಈ ಕಾನೂನು ಅಧಿಕೃತವಾಗಿ ಅಂಗೀಕಾರವಾಗುವ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಹೊಸ ಮಸೂದೆಯನ್ನು ಹಿಂಪಡೆಯುವಂತೆ ಇಟಲಿ, ಜರ್ಮನಿ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್ ದೇಶಗಳು ಇಸ್ರೇಲ್ ಸರ್ಕಾರಕ್ಕೆ ವಿನಂತಿಸಿವೆ ಎಂದು ತಾಜಾನಿ ತಿಳಿಸಿದ್ದಾರೆ.

ವಿಶೇಷವಾಗಿ ವಿಶ್ವಸಂಸ್ಥೆಯಲ್ಲಿ ಮತದಾನದ ಮೂಲಕ ಅಂಗೀಕರಿಸಲಾದ ನಿರ್ಣಯಗಳ ಪ್ರಕಾರ, ಮರಣದಂಡನೆಯ ಮೇಲಿನ ತಡೆಯಾಜ್ಞೆಗೆ ಬದ್ಧರಾಗಿರಬೇಕು. ಈ ಬದ್ಧತೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ತಾಜಾನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.

“ನಮ್ಮ ಪಾಲಿಗೆ, ಜೀವನವು ಒಂದು ಸಂಪೂರ್ಣ ಮೌಲ್ಯವಾಗಿದೆ; ಶಿಕ್ಷೆಯನ್ನು ವಿಧಿಸುವ ಸಲುವಾಗಿ ಅದನ್ನು ಕಸಿದುಕೊಳ್ಳುವ ಹಕ್ಕನ್ನು ತನ್ನದಾಗಿಸಿಕೊಳ್ಳುವುದು ಮಾನವೀಯವಲ್ಲದ ಕ್ರಮವಾಗಿದೆ ಮತ್ತು ಇದು ವ್ಯಕ್ತಿಯ ಘನತೆಯನ್ನು ಉಲ್ಲಂಘಿಸುತ್ತದೆ” ಎಂದು ಅವರು ಹೇಳಿದ್ದಾರೆ.









 











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...