Homeಅಂತರಾಷ್ಟ್ರೀಯ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ - ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ – ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

- Advertisement -
- Advertisement -

ದೇಶದ ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹತ್ತು ಲಕ್ಷ ಆಶಾ ಕಾರ್ಯಕರ್ತರನ್ನು ವಿಶ್ವ ಸಂಸ್ಥೆ ಗೌರವಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(WHO)ಯ 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಭಾರತದ ಆಶಾ ಕಾರ್ಯಕರ್ತರು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಗೆ ಪಾತ್ರರಾಗಿದ್ದಾರೆ.

“ಕೊರೊನಾ ಸಾಂಕ್ರಾಮಿಕ ರೋಗದ ಉದ್ದಕ್ಕೂ ಕಂಡಿರುವಂತೆ ಗ್ರಾಮೀಣ ಭಾಗದ ಬಡತನದಲ್ಲಿ ವಾಸಿಸುವವರು ಕೂಡಾ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಸಮುದಾಯವನ್ನು ಆರೋಗ್ಯ ವ್ಯವಸ್ಥೆಯೊಂದಿಗೆ ಸಂಪರ್ಕಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಕ್ಕಾಗಿ ಭಾರತದ ಹತ್ತು ಲಕ್ಷಕ್ಕೂ ಹೆಚ್ಚು ‘ಆಶಾ’ (ಹಿಂದಿಯಲ್ಲಿ ‘ಭರವಸೆ’ ಎಂದರ್ಥ) ಮಹಿಳಾ ಸ್ವಯಂಸೇವಕರನ್ನು ಗೌರವಿಸಲಾಗಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

ವಿಶ್ವ ಸಂಸ್ಥೆಯು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಅನ್ನು ಆರು ಮಂದಿಗೆ ನೀಡಿದ್ದು, ಅದರಲ್ಲಿ ದೇಶದ ಆಶಾ ಕಾರ್ಯಕರ್ತರೂ ಒಬ್ಬರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, “ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಹಿಂದೆಂದೂ ಕಂಡಿಲ್ಲ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಅದರಿಂದ ರಕ್ಷಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಈ ಪ್ರಶಸ್ತಿಯು ಗುರುತಿಸುತ್ತದೆ” ಎಂದು ಹೇಳಿದ್ದರೆ.

ಇದನ್ನೂ ಓದಿ: ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಆಶಾ ಕಾರ್ಯಕರ್ತರನ್ನು ವಿಶ್ವಸಂಸ್ಥೆಯು ಗೌರವಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಡಬ್ಲ್ಯುಎಚ್‌ಒ ಮಹಾನಿರ್ದೇಶಕರ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆಗಳು. ಆರೋಗ್ಯಕರ ಭಾರತವನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಮೆಚ್ಚುವಂತದ್ದು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಶಾ ಕಾರ್ಯಕರ್ತ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, “ನಾವು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಜಗತ್ತೇ ಗುರುತಿಸಿದೆ. ಈ ಗೌರವಕ್ಕೆ ಪಾತ್ರರಾಗಿರುವುದಕ್ಕೆ ಪ್ರಧಾನಿ ಮೋದಿ ಕೂಡಾ ಅಭಿನಂದಿಸಿದ್ದಾರೆ. ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ” ಎಂದು ಅವರು ತಿಳಿಸಿದ್ದಾರೆ.

“ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ. ಆದರೆ ನಾವು ದುಡಿದ ಹಣವನ್ನೂ ನೀಡಲು ಕೂಡಾ ಸರ್ಕಾರ ಸತಾಯಿಸುತ್ತದೆ. ಮೊನ್ನೆ ಮೇ 17 ರಂದು ಕೂಡಾ ನಾವು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದೇವೆ. ಆ ಹೋರಾಟದಲ್ಲೂ ನಾವು ಹೇಳಿದ್ದು ನಮ್ಮ ದುಡಿಮೆಯ ಪ್ರತಿಫಲ ಕೊಡಿ ಎಂದಷ್ಟೆ. ಗೌರವಧನದ ಹೆಸರಿನಲ್ಲಿ 5 ಸಾವಿರವನ್ನು ನೀಡಲಾಗುತ್ತದೆ. ಅದನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

“ಮಾಡಿದ ಕೆಲಸಗಳಿಗೆ 50 ರಿಂದ 200 ರೂ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಕೆಲಸಗಳನ್ನು ಪೋರ್ಟಲ್ ಅಲ್ಲಿ ದಾಖಲಾಗಬೇಕಾಗುತ್ತದೆ. ಆದರೆ ಅದನ್ನು ದಾಖಲು ಮಾಡಲು ವ್ಯವಸ್ಥೆಯಿಲ್ಲ. ಆ ಹುದ್ದೆಯನ್ನು ಇನ್ನೂ ಖಾಲಿ ಬಿಡಲಾಗಿದೆ. ಅದನ್ನು ದಾಖಲೆ ಮಾಡುವವರೆಗೂ ನಮಗೆ ಪ್ರೋತ್ಸಾಹ ಧನ ಬರುವುದಿಲ್ಲ. ಇದೂ ಕೂಡಾ ಸರ್ಕಾರ ನಮಗೆ ಮಾಡುವ ಮೋಸ ಅಲ್ಲವೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಎಲ್ಲರ ಆರೋಗ್ಯವೂ ಚೆನ್ನಾಗಿ ಇರಬೇಕು ಎಂದು ನಾವು ಹಗಲು-ರಾತ್ರಿ ಕೆಲಸ ಮಾಡುತ್ತೇವೆ. ಆದರೆ ನಮ್ಮ ಆರೋಗ್ಯ ಕೆಟ್ಟರೆ ಅದಕ್ಕೆ ಸರ್ಕಾರ ಸಹಾಯ ಮಾಡುವುದಿಲ್ಲ. ಆರೋಗ್ಯ ವಿಚಾರವಾಗಿ ಒಂದು ತಿಂಗಳು ಕೆಲಸ ಮಾಡಿಲ್ಲ ಅಂದರೆ ಒಂದು ರುಪಾಯಿಯೂ ನಮಗೆ ಬರುವುದಿಲ್ಲ. ಅಷ್ಟೊಂದು ನಿಕೃಷ್ಟವಾಗಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಇದೆಲ್ಲಕ್ಕೆ ಸರ್ಕಾರ ಪರಿಹಾರ ನೀಡಿದರೆ ನಿಜವಾಗಿಯೂ ನಮ್ಮನ್ನು ಗೌರವಿಸಿದ ಹಾಗೆ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಕಾರ್ಮಿಕರು ದುಡಿಮೆ ತಕ್ಕಂತೆ ಕೂಲಿ, ಸಂಬಳ ಪಡೆಯುತ್ತಾರೆ. ಆದರೆ ನಿಮ್ಮ ದುಡಿಮೆಗೆ ಪ್ರತಿಫಲವಾಗಿ ‘ಗೌರವಧನ’ ಎಂಬ ಹೆಸರಿಟ್ಟು ನಿಮ್ಮ ಶ್ರಮಕ್ಕೆ ಮೋಸ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ವಾಸ್ತವದಲ್ಲಿ ನಾವು ಮಾಡುತ್ತಿರುವ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸ. ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....