Homeಅಂತರಾಷ್ಟ್ರೀಯ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ - ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ – ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

- Advertisement -
- Advertisement -

ದೇಶದ ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹತ್ತು ಲಕ್ಷ ಆಶಾ ಕಾರ್ಯಕರ್ತರನ್ನು ವಿಶ್ವ ಸಂಸ್ಥೆ ಗೌರವಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(WHO)ಯ 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಭಾರತದ ಆಶಾ ಕಾರ್ಯಕರ್ತರು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಗೆ ಪಾತ್ರರಾಗಿದ್ದಾರೆ.

“ಕೊರೊನಾ ಸಾಂಕ್ರಾಮಿಕ ರೋಗದ ಉದ್ದಕ್ಕೂ ಕಂಡಿರುವಂತೆ ಗ್ರಾಮೀಣ ಭಾಗದ ಬಡತನದಲ್ಲಿ ವಾಸಿಸುವವರು ಕೂಡಾ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಸಮುದಾಯವನ್ನು ಆರೋಗ್ಯ ವ್ಯವಸ್ಥೆಯೊಂದಿಗೆ ಸಂಪರ್ಕಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಕ್ಕಾಗಿ ಭಾರತದ ಹತ್ತು ಲಕ್ಷಕ್ಕೂ ಹೆಚ್ಚು ‘ಆಶಾ’ (ಹಿಂದಿಯಲ್ಲಿ ‘ಭರವಸೆ’ ಎಂದರ್ಥ) ಮಹಿಳಾ ಸ್ವಯಂಸೇವಕರನ್ನು ಗೌರವಿಸಲಾಗಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

ವಿಶ್ವ ಸಂಸ್ಥೆಯು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಅನ್ನು ಆರು ಮಂದಿಗೆ ನೀಡಿದ್ದು, ಅದರಲ್ಲಿ ದೇಶದ ಆಶಾ ಕಾರ್ಯಕರ್ತರೂ ಒಬ್ಬರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, “ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಹಿಂದೆಂದೂ ಕಂಡಿಲ್ಲ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಅದರಿಂದ ರಕ್ಷಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಈ ಪ್ರಶಸ್ತಿಯು ಗುರುತಿಸುತ್ತದೆ” ಎಂದು ಹೇಳಿದ್ದರೆ.

ಇದನ್ನೂ ಓದಿ: ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಆಶಾ ಕಾರ್ಯಕರ್ತರನ್ನು ವಿಶ್ವಸಂಸ್ಥೆಯು ಗೌರವಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಡಬ್ಲ್ಯುಎಚ್‌ಒ ಮಹಾನಿರ್ದೇಶಕರ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆಗಳು. ಆರೋಗ್ಯಕರ ಭಾರತವನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಮೆಚ್ಚುವಂತದ್ದು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಶಾ ಕಾರ್ಯಕರ್ತ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, “ನಾವು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಜಗತ್ತೇ ಗುರುತಿಸಿದೆ. ಈ ಗೌರವಕ್ಕೆ ಪಾತ್ರರಾಗಿರುವುದಕ್ಕೆ ಪ್ರಧಾನಿ ಮೋದಿ ಕೂಡಾ ಅಭಿನಂದಿಸಿದ್ದಾರೆ. ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ” ಎಂದು ಅವರು ತಿಳಿಸಿದ್ದಾರೆ.

“ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ. ಆದರೆ ನಾವು ದುಡಿದ ಹಣವನ್ನೂ ನೀಡಲು ಕೂಡಾ ಸರ್ಕಾರ ಸತಾಯಿಸುತ್ತದೆ. ಮೊನ್ನೆ ಮೇ 17 ರಂದು ಕೂಡಾ ನಾವು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದೇವೆ. ಆ ಹೋರಾಟದಲ್ಲೂ ನಾವು ಹೇಳಿದ್ದು ನಮ್ಮ ದುಡಿಮೆಯ ಪ್ರತಿಫಲ ಕೊಡಿ ಎಂದಷ್ಟೆ. ಗೌರವಧನದ ಹೆಸರಿನಲ್ಲಿ 5 ಸಾವಿರವನ್ನು ನೀಡಲಾಗುತ್ತದೆ. ಅದನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

“ಮಾಡಿದ ಕೆಲಸಗಳಿಗೆ 50 ರಿಂದ 200 ರೂ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಕೆಲಸಗಳನ್ನು ಪೋರ್ಟಲ್ ಅಲ್ಲಿ ದಾಖಲಾಗಬೇಕಾಗುತ್ತದೆ. ಆದರೆ ಅದನ್ನು ದಾಖಲು ಮಾಡಲು ವ್ಯವಸ್ಥೆಯಿಲ್ಲ. ಆ ಹುದ್ದೆಯನ್ನು ಇನ್ನೂ ಖಾಲಿ ಬಿಡಲಾಗಿದೆ. ಅದನ್ನು ದಾಖಲೆ ಮಾಡುವವರೆಗೂ ನಮಗೆ ಪ್ರೋತ್ಸಾಹ ಧನ ಬರುವುದಿಲ್ಲ. ಇದೂ ಕೂಡಾ ಸರ್ಕಾರ ನಮಗೆ ಮಾಡುವ ಮೋಸ ಅಲ್ಲವೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಎಲ್ಲರ ಆರೋಗ್ಯವೂ ಚೆನ್ನಾಗಿ ಇರಬೇಕು ಎಂದು ನಾವು ಹಗಲು-ರಾತ್ರಿ ಕೆಲಸ ಮಾಡುತ್ತೇವೆ. ಆದರೆ ನಮ್ಮ ಆರೋಗ್ಯ ಕೆಟ್ಟರೆ ಅದಕ್ಕೆ ಸರ್ಕಾರ ಸಹಾಯ ಮಾಡುವುದಿಲ್ಲ. ಆರೋಗ್ಯ ವಿಚಾರವಾಗಿ ಒಂದು ತಿಂಗಳು ಕೆಲಸ ಮಾಡಿಲ್ಲ ಅಂದರೆ ಒಂದು ರುಪಾಯಿಯೂ ನಮಗೆ ಬರುವುದಿಲ್ಲ. ಅಷ್ಟೊಂದು ನಿಕೃಷ್ಟವಾಗಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಇದೆಲ್ಲಕ್ಕೆ ಸರ್ಕಾರ ಪರಿಹಾರ ನೀಡಿದರೆ ನಿಜವಾಗಿಯೂ ನಮ್ಮನ್ನು ಗೌರವಿಸಿದ ಹಾಗೆ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಕಾರ್ಮಿಕರು ದುಡಿಮೆ ತಕ್ಕಂತೆ ಕೂಲಿ, ಸಂಬಳ ಪಡೆಯುತ್ತಾರೆ. ಆದರೆ ನಿಮ್ಮ ದುಡಿಮೆಗೆ ಪ್ರತಿಫಲವಾಗಿ ‘ಗೌರವಧನ’ ಎಂಬ ಹೆಸರಿಟ್ಟು ನಿಮ್ಮ ಶ್ರಮಕ್ಕೆ ಮೋಸ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ವಾಸ್ತವದಲ್ಲಿ ನಾವು ಮಾಡುತ್ತಿರುವ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸ. ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...